BREAKING NEWS

ಮೃತ ವ್ಯಕ್ತಿಯಿಂದ ಸಾಲ ವಸೂಲಿಗೆ ಮುಂದಾದ ಎಸ್ ಬಿ ಐ ಅನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಕೋರ್ಟ್

ನವದೆಹಲಿ : ಯಾವುದೇ ಬ್ಯಾಂಕ್ ಗ್ರಾಹಕನಿಗೆ ಸಾಲ ಮರುಪಾವತಿ ಮಾಡುವಂತೆ ಮೊಕದ್ದಮೆ ದಾಖಲಿಸುವ ಮುನ್ನ ಅವರು ಬದುಕಿದ್ದಾರೋ ಅಥವಾ ಮೃತಪಟ್ಟಿದ್ದಾರೋ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ದೆಹಲಿಯ ನ್ಯಾಯಾಲಯವೊಂದು ಹೇಳಿದೆ.

ಸಾವನ್ನಪ್ಪಿದ್ದ ವ್ಯಕ್ತಿಯ ವಿರುದ್ಧ ಎಸ್ ಬಿ ಐ ಬ್ಯಾಂಕ್ ಸಾಲ ವಸೂಲಾತಿಗಾಗಿ ಸಲ್ಲಿಸಿದ್ದ ಅಜ್ಜಿಯನ್ನು ನ್ಯಾಯಾಲಯ ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ಸಿಯಾ ನಂದ್ ಎಂಬ ವ್ಯಕ್ತಿಯಿಂದ ಸಾಲ ಮತ್ತು ಬಡ್ಡಿ ಸೇರಿ 13.51 ಲಕ್ಷ ಹಣ ಬರಬೇಕು ಎಂದು ಎಸ್ ಬಿ ಐ ಬ್ಯಾಂಕ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಿಯಾನಂದ್ ಅವರಿಂದ ಮಾಹಿತಿ ಪಡೆದು ಬರುವಂತೆ ಸೂಚಿಸಿದ್ದರು. ಈ ವೇಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಎರಡು ವರ್ಷ ಮೊದಲೇ ಸಿಯಾ ನಂದ್ ಮೃತಪಟ್ಟಿದ್ದಾರೆ ಎಂಬ ವಿಷಯ ತಿಳಿದು ಬಂದಿತ್ತು.

ನಂತರ ಬ್ಯಾಂಕ್ ನ ಶಾಖ ವ್ಯವಸ್ಥಾಪಕರಿಗೆ ನ್ಯಾಯಾಲಯ ತಪ್ಪು ಪ್ರಮಾಣ ಪತ್ರ ನೀಡಿದ್ದಕ್ಕಾಗಿ ನೋಟಿಸ್ ನೀಡಿತ್ತು. ಬ್ಯಾಂಕಿನ ಕಾನೂನು, ಸಾಲ ವಸೂಲಾತಿ ಕೋರ್ಟ್ ಪ್ರಕರಣಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮೃತಪಟ್ಟ ವ್ಯಕ್ತಿಯ ವಿರುದ್ಧ ಸಲ್ಲಿಸಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಕ್ಕೆ ಕಾರಣ ಹೇಳುವಂತೆ ಕೇಳಿತ್ತು.

ಇದೀಗ ನ್ಯಾಯಾಲಯದ ಮುಂದೆ ಎಸ್ ಬಿ ಐ ತಪ್ಪೊಪ್ಪಿಕೊಂಡಿದೆ.

lokesh

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

6 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

7 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

7 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

7 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

7 hours ago