ನವದೆಹಲಿ : ಯಾವುದೇ ಬ್ಯಾಂಕ್ ಗ್ರಾಹಕನಿಗೆ ಸಾಲ ಮರುಪಾವತಿ ಮಾಡುವಂತೆ ಮೊಕದ್ದಮೆ ದಾಖಲಿಸುವ ಮುನ್ನ ಅವರು ಬದುಕಿದ್ದಾರೋ ಅಥವಾ ಮೃತಪಟ್ಟಿದ್ದಾರೋ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ದೆಹಲಿಯ ನ್ಯಾಯಾಲಯವೊಂದು ಹೇಳಿದೆ.
ಸಾವನ್ನಪ್ಪಿದ್ದ ವ್ಯಕ್ತಿಯ ವಿರುದ್ಧ ಎಸ್ ಬಿ ಐ ಬ್ಯಾಂಕ್ ಸಾಲ ವಸೂಲಾತಿಗಾಗಿ ಸಲ್ಲಿಸಿದ್ದ ಅಜ್ಜಿಯನ್ನು ನ್ಯಾಯಾಲಯ ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.
ಸಿಯಾ ನಂದ್ ಎಂಬ ವ್ಯಕ್ತಿಯಿಂದ ಸಾಲ ಮತ್ತು ಬಡ್ಡಿ ಸೇರಿ 13.51 ಲಕ್ಷ ಹಣ ಬರಬೇಕು ಎಂದು ಎಸ್ ಬಿ ಐ ಬ್ಯಾಂಕ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಿಯಾನಂದ್ ಅವರಿಂದ ಮಾಹಿತಿ ಪಡೆದು ಬರುವಂತೆ ಸೂಚಿಸಿದ್ದರು. ಈ ವೇಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಎರಡು ವರ್ಷ ಮೊದಲೇ ಸಿಯಾ ನಂದ್ ಮೃತಪಟ್ಟಿದ್ದಾರೆ ಎಂಬ ವಿಷಯ ತಿಳಿದು ಬಂದಿತ್ತು.
ನಂತರ ಬ್ಯಾಂಕ್ ನ ಶಾಖ ವ್ಯವಸ್ಥಾಪಕರಿಗೆ ನ್ಯಾಯಾಲಯ ತಪ್ಪು ಪ್ರಮಾಣ ಪತ್ರ ನೀಡಿದ್ದಕ್ಕಾಗಿ ನೋಟಿಸ್ ನೀಡಿತ್ತು. ಬ್ಯಾಂಕಿನ ಕಾನೂನು, ಸಾಲ ವಸೂಲಾತಿ ಕೋರ್ಟ್ ಪ್ರಕರಣಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮೃತಪಟ್ಟ ವ್ಯಕ್ತಿಯ ವಿರುದ್ಧ ಸಲ್ಲಿಸಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಕ್ಕೆ ಕಾರಣ ಹೇಳುವಂತೆ ಕೇಳಿತ್ತು.
ಇದೀಗ ನ್ಯಾಯಾಲಯದ ಮುಂದೆ ಎಸ್ ಬಿ ಐ ತಪ್ಪೊಪ್ಪಿಕೊಂಡಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…