BREAKING NEWS

ಮೃತ ವ್ಯಕ್ತಿಯಿಂದ ಸಾಲ ವಸೂಲಿಗೆ ಮುಂದಾದ ಎಸ್ ಬಿ ಐ ಅನ್ನು ತರಾಟೆಗೆ ತೆಗೆದುಕೊಂಡ ದೆಹಲಿ ಕೋರ್ಟ್

ನವದೆಹಲಿ : ಯಾವುದೇ ಬ್ಯಾಂಕ್ ಗ್ರಾಹಕನಿಗೆ ಸಾಲ ಮರುಪಾವತಿ ಮಾಡುವಂತೆ ಮೊಕದ್ದಮೆ ದಾಖಲಿಸುವ ಮುನ್ನ ಅವರು ಬದುಕಿದ್ದಾರೋ ಅಥವಾ ಮೃತಪಟ್ಟಿದ್ದಾರೋ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ದೆಹಲಿಯ ನ್ಯಾಯಾಲಯವೊಂದು ಹೇಳಿದೆ.

ಸಾವನ್ನಪ್ಪಿದ್ದ ವ್ಯಕ್ತಿಯ ವಿರುದ್ಧ ಎಸ್ ಬಿ ಐ ಬ್ಯಾಂಕ್ ಸಾಲ ವಸೂಲಾತಿಗಾಗಿ ಸಲ್ಲಿಸಿದ್ದ ಅಜ್ಜಿಯನ್ನು ನ್ಯಾಯಾಲಯ ದೆಹಲಿ ನ್ಯಾಯಾಲಯ ವಜಾಗೊಳಿಸಿದೆ.

ಸಿಯಾ ನಂದ್ ಎಂಬ ವ್ಯಕ್ತಿಯಿಂದ ಸಾಲ ಮತ್ತು ಬಡ್ಡಿ ಸೇರಿ 13.51 ಲಕ್ಷ ಹಣ ಬರಬೇಕು ಎಂದು ಎಸ್ ಬಿ ಐ ಬ್ಯಾಂಕ್ ಅರ್ಜಿ ಸಲ್ಲಿಸಿತ್ತು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಿಯಾನಂದ್ ಅವರಿಂದ ಮಾಹಿತಿ ಪಡೆದು ಬರುವಂತೆ ಸೂಚಿಸಿದ್ದರು. ಈ ವೇಳೆ ಕೋರ್ಟ್ ಗೆ ಅರ್ಜಿ ಸಲ್ಲಿಸುವ ಎರಡು ವರ್ಷ ಮೊದಲೇ ಸಿಯಾ ನಂದ್ ಮೃತಪಟ್ಟಿದ್ದಾರೆ ಎಂಬ ವಿಷಯ ತಿಳಿದು ಬಂದಿತ್ತು.

ನಂತರ ಬ್ಯಾಂಕ್ ನ ಶಾಖ ವ್ಯವಸ್ಥಾಪಕರಿಗೆ ನ್ಯಾಯಾಲಯ ತಪ್ಪು ಪ್ರಮಾಣ ಪತ್ರ ನೀಡಿದ್ದಕ್ಕಾಗಿ ನೋಟಿಸ್ ನೀಡಿತ್ತು. ಬ್ಯಾಂಕಿನ ಕಾನೂನು, ಸಾಲ ವಸೂಲಾತಿ ಕೋರ್ಟ್ ಪ್ರಕರಣಗಳ ವಿಭಾಗದ ಪ್ರಧಾನ ವ್ಯವಸ್ಥಾಪಕರಿಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಾಲಯ ಮೃತಪಟ್ಟ ವ್ಯಕ್ತಿಯ ವಿರುದ್ಧ ಸಲ್ಲಿಸಿ ಅರ್ಜಿ ಸಲ್ಲಿಸಲು ತೀರ್ಮಾನಿಸಿದ್ದಕ್ಕೆ ಕಾರಣ ಹೇಳುವಂತೆ ಕೇಳಿತ್ತು.

ಇದೀಗ ನ್ಯಾಯಾಲಯದ ಮುಂದೆ ಎಸ್ ಬಿ ಐ ತಪ್ಪೊಪ್ಪಿಕೊಂಡಿದೆ.

lokesh

Recent Posts

ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ನಡೆಯಲಿಲ್ಲ, ನಾವೇ ಗೆದ್ದಿದ್ದೇವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಉಪಚುನಾವಣೆಯಲ್ಲಿ ವಿಪಕ್ಷಗಳ ಷಡ್ಯಂತ್ರ ಏನೂ ನಡೆಯಲಿಲ್ಲ. ನಾನೇ ಗೆಲುವು ಸಾಧಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ರಾಜ್ಯದ…

14 mins ago

ಖಾಲಿ ಕಾಂಪೌಂಡ್‌ಗಳ ಮುಂದೆ ನಿಂತು ಮೂತ್ರ ವಿಸರ್ಜನೆ ಮಾಡುವವರೇ ಎಚ್ಚರ ಎಚ್ಚರ.

ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…

45 mins ago

ಜನಗಣತಿ ಮಾಡುವ ವೇಳೆಯೇ ಹೃದಯಾಘಾತ: ಶಿಕ್ಷಕ ಸಾವು

ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…

2 hours ago

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

3 hours ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

3 hours ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

3 hours ago