BREAKING NEWS

ದೆಹಲಿ ದೇಶದ ಎಲೆಕ್ಟ್ರಿಕ್ ವಾಹನಗಳ ರಾಜಧಾನಿ: ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

42 ಚಾರ್ಜಿಂಗ್ ಸ್ಟೇಷನ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, 2014 ರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ತಿಳಿಸಿದರು.

ಮಾಲಿನ್ಯವನ್ನು ಕಡಿಮೆಗೊಳಿಸಲು ವಿದ್ಯುತ್ ಚಾಲಿತ ವಾಹನಗಳ ಉತ್ತೇಜನಕ್ಕೆ ಆರಂಭಿಸಿದೇವು. 2020ರಲ್ಲಿ ವಿದ್ಯುತ್‌ ವಾಹನಗಳಿಗಾಗಿ ನೀತಿಯೊಂದನ್ನು ರೂಪಿಸಿದೇವು ಮತ್ತು  2025 ರ ವೇಳೆಗೆ ದೆಹಲಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಎಲೆಕ್ಟ್ರಿಕ್ ಆಗಿರುವ ಗುರಿ ಹೊಂದಿದ್ದೇವೆ ಎಂದರು.

ದೆಹಲಿಯನ್ನು ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ 2020ರಲ್ಲಿ ದೆಹಲಿ ವಿದ್ಯುತ್ ಚಾಲಿತ ನೀತಿಯನ್ನು ಅನುಷ್ಟಾನಗೊಳಿಸಲಾಗಿತ್ತು. ರಾಷ್ಟ್ರ ರಾಜಧಾನಿಯಲ್ಲಿ  ಖರೀದಿಸಿದ ಎಲ್ಲಾ ವಾಹನಗಳಲ್ಲಿ ಶೇಕಡಾ 13 ರಷ್ಟು ಎಲೆಕ್ಟ್ರಿಕ್ ವಾಹನಗಳು ಎಂಬುದನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಆಗಸ್ಟ್ 2020 ರಿಂದ  1. 28 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ. ನೀತಿ ಆಯೋಗ ಕೂಡಾ ದೆಹಲಿ ಎಲೆಕ್ಟ್ರಿಕ್ ವಾಹನಗಳ ನೀತಿಯನ್ನು ಶ್ಲಾಘಿಸಿದೆ ಎಂದು ಅವರು ಹೇಳಿದರು.

ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದ್ದು, ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಅದೊಂದು ಜನಾಂದೋಲನವಾಗಿ ಮಾರ್ಪಟ್ಟಿದೆ.  ದೇಶದಾದ್ಯಂತ ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದ್ದೇವೆ. ದೇಶಾದ್ಯಂತ ಮೂರನೇ ಒಂದು ಭಾಗದಷ್ಟು ಚಾರ್ಜಿಂಗ್ ಸ್ಟೇಷನ್‌ಗಳು ದೆಹಲಿಯಲ್ಲಿವೆ ಎಂದು ಅವರು ಹೇಳಿದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

5 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

7 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

21 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago