BREAKING NEWS

ದೆಹಲಿ ದೇಶದ ಎಲೆಕ್ಟ್ರಿಕ್ ವಾಹನಗಳ ರಾಜಧಾನಿ: ಮುಖ್ಯಮಂತ್ರಿ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅತಿ ಹೆಚ್ಚು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಮೂಲಕ ದೇಶದ ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ.

42 ಚಾರ್ಜಿಂಗ್ ಸ್ಟೇಷನ್ ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, 2014 ರಿಂದ ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟ ಕಡಿಮೆಯಾಗಿದೆ ಎಂದು ತಿಳಿಸಿದರು.

ಮಾಲಿನ್ಯವನ್ನು ಕಡಿಮೆಗೊಳಿಸಲು ವಿದ್ಯುತ್ ಚಾಲಿತ ವಾಹನಗಳ ಉತ್ತೇಜನಕ್ಕೆ ಆರಂಭಿಸಿದೇವು. 2020ರಲ್ಲಿ ವಿದ್ಯುತ್‌ ವಾಹನಗಳಿಗಾಗಿ ನೀತಿಯೊಂದನ್ನು ರೂಪಿಸಿದೇವು ಮತ್ತು  2025 ರ ವೇಳೆಗೆ ದೆಹಲಿಯಲ್ಲಿ ಖರೀದಿಸಿದ ಎಲ್ಲಾ ವಾಹನಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು ಎಲೆಕ್ಟ್ರಿಕ್ ಆಗಿರುವ ಗುರಿ ಹೊಂದಿದ್ದೇವೆ ಎಂದರು.

ದೆಹಲಿಯನ್ನು ವಿದ್ಯುತ್ ಚಾಲಿತ ವಾಹನಗಳ ರಾಜಧಾನಿಯನ್ನಾಗಿ ಮಾಡುವ ಗುರಿಯೊಂದಿಗೆ 2020ರಲ್ಲಿ ದೆಹಲಿ ವಿದ್ಯುತ್ ಚಾಲಿತ ನೀತಿಯನ್ನು ಅನುಷ್ಟಾನಗೊಳಿಸಲಾಗಿತ್ತು. ರಾಷ್ಟ್ರ ರಾಜಧಾನಿಯಲ್ಲಿ  ಖರೀದಿಸಿದ ಎಲ್ಲಾ ವಾಹನಗಳಲ್ಲಿ ಶೇಕಡಾ 13 ರಷ್ಟು ಎಲೆಕ್ಟ್ರಿಕ್ ವಾಹನಗಳು ಎಂಬುದನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಆಗಸ್ಟ್ 2020 ರಿಂದ  1. 28 ಲಕ್ಷ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲಾಗಿದೆ. ನೀತಿ ಆಯೋಗ ಕೂಡಾ ದೆಹಲಿ ಎಲೆಕ್ಟ್ರಿಕ್ ವಾಹನಗಳ ನೀತಿಯನ್ನು ಶ್ಲಾಘಿಸಿದೆ ಎಂದು ಅವರು ಹೇಳಿದರು.

ಚಾರ್ಜಿಂಗ್ ಸ್ಟೇಷನ್‌ಗಳಲ್ಲಿ ಅಗ್ಗದ ದರದಲ್ಲಿ ವಿದ್ಯುತ್ ನೀಡಲಾಗುತ್ತಿದ್ದು, ಜನರು ನಮ್ಮನ್ನು ಬೆಂಬಲಿಸಿದ್ದಾರೆ. ಅದೊಂದು ಜನಾಂದೋಲನವಾಗಿ ಮಾರ್ಪಟ್ಟಿದೆ.  ದೇಶದಾದ್ಯಂತ ಅತಿ ಹೆಚ್ಚು ಚಾರ್ಜಿಂಗ್ ಸ್ಟೇಷನ್‌ಗಳನ್ನು ಹೊಂದಿದ್ದೇವೆ. ದೇಶಾದ್ಯಂತ ಮೂರನೇ ಒಂದು ಭಾಗದಷ್ಟು ಚಾರ್ಜಿಂಗ್ ಸ್ಟೇಷನ್‌ಗಳು ದೆಹಲಿಯಲ್ಲಿವೆ ಎಂದು ಅವರು ಹೇಳಿದರು.

andolanait

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

14 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

15 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

16 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

16 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

17 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

18 hours ago