ನವದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ದೀಪಕ್ ಬಾಕ್ಸರ್ನನ್ನು ಮೆಕ್ಸಿಕೊದಲ್ಲಿ ಬಂಧಿಸಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಸಹಾಯದಿಂದ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್ ಬಾಕ್ಸರ್ನನ್ನು ಮೆಕ್ಸಿಕೊದಲ್ಲಿ ಸೆರೆ ಹಿಡಿದಿದೆ.
ದೀಪಕ್ ಬಾಕ್ಸರ್ ಬಂಧನಕ್ಕಾಗಿ ಎಫ್ಬಿಐ ಸೇರಿದಂತೆ ಮೆಕ್ಸಿಕೊದ ಪೊಲೀಸರು ನಮಗೆ ಸಹಾಯ ಮಾಡಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಸಿಪಿ) ಎಚ್ಜಿಎಸ್ ಧಲಿವಾಲ್ ಅವರು ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
‘ದೆಹಲಿ-ಎನ್ಸಿಆರ್ನಲ್ಲಿ ವ್ಯಾಪ್ತಿಯಲ್ಲಿ ದೀಪಕ್ ಬಾಕ್ಸರ್ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಆಗಿದ್ದ. ಆತನಿಗಾಗಿ ದೆಹಲಿಯ ವಿಶೇಷ ತಂಡ ಹಲವು ತಿಂಗಳಿಂದ ಹುಡುಕಾಟ ನಡೆಸಿತ್ತು’ ಎಂದು ಧಲಿವಾಲ್ ತಿಳಿಸಿದ್ದಾರೆ.
ದೆಹಲಿ ಪೊಲೀಸರು ಭಾರತದ ಹೊರಗೆ ಗ್ಯಾಂಗ್ಸ್ಟರ್ನನ್ನು ಬಂಧಿಸಿರುವುದು ಇದೇ ಮೊದಲು. ದೀಪಕ್ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು ₹3 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು.
2021ರಲ್ಲಿ ಜಿತೇಂದ್ರ ಗೋಗಿ ಹತ್ಯೆಯ ನಂತರ, ದೀಪಕ್ ‘ಗೋಗಿ ಗ್ಯಾಂಗ್’ ಅನ್ನು ಮುನ್ನಡೆಸಲು ಪ್ರಾರಂಭಿಸಿದ್ದ. ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಜಿತೇಂದ್ರ ಗೋಗಿ ಅವರನ್ನು ಹತ್ಯೆ ಮಾಡಲಾಗಿತ್ತು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…