BREAKING NEWS

ಗ್ಯಾಂಗ್​ಸ್ಟರ್ ದೀಪಕ್​ ಬಾಕ್ಸರ್​ನನ್ನು ಮೆಕ್ಸಿಕೊದಲ್ಲಿ ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ದೀಪಕ್ ಬಾಕ್ಸರ್​ನನ್ನು ಮೆಕ್ಸಿಕೊದಲ್ಲಿ ಬಂಧಿಸಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ಸೆರೆ ಹಿಡಿದಿದೆ.

ದೀಪಕ್ ಬಾಕ್ಸರ್‌ ಬಂಧನಕ್ಕಾಗಿ ಎಫ್‌ಬಿಐ ಸೇರಿದಂತೆ ಮೆಕ್ಸಿಕೊದ ಪೊಲೀಸರು ನಮಗೆ ಸಹಾಯ ಮಾಡಿದ್ದಾರೆ ಎಂದು ವಿಶೇಷ ಪೊಲೀಸ್ ಆಯುಕ್ತ (ಸಿಪಿ) ಎಚ್‌ಜಿಎಸ್ ಧಲಿವಾಲ್ ಅವರು ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ದೆಹಲಿ-ಎನ್‌ಸಿಆರ್‌ನಲ್ಲಿ ವ್ಯಾಪ್ತಿಯಲ್ಲಿ ದೀಪಕ್ ಬಾಕ್ಸರ್‌ ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ಆಗಿದ್ದ. ಆತನಿಗಾಗಿ ದೆಹಲಿಯ ವಿಶೇಷ ತಂಡ ಹಲವು ತಿಂಗಳಿಂದ ಹುಡುಕಾಟ ನಡೆಸಿತ್ತು’ ಎಂದು ಧಲಿವಾಲ್ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಭಾರತದ ಹೊರಗೆ ಗ್ಯಾಂಗ್​ಸ್ಟರ್​ನನ್ನು ಬಂಧಿಸಿರುವುದು ಇದೇ ಮೊದಲು. ದೀಪಕ್​ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು ₹3 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು.

2021ರಲ್ಲಿ ಜಿತೇಂದ್ರ ಗೋಗಿ ಹತ್ಯೆಯ ನಂತರ, ದೀಪಕ್ ‘ಗೋಗಿ ಗ್ಯಾಂಗ್’ ಅನ್ನು ಮುನ್ನಡೆಸಲು ಪ್ರಾರಂಭಿಸಿದ್ದ. ರೋಹಿಣಿ ನ್ಯಾಯಾಲಯದ ಆವರಣದಲ್ಲಿ ಜಿತೇಂದ್ರ ಗೋಗಿ ಅವರನ್ನು ಹತ್ಯೆ ಮಾಡಲಾಗಿತ್ತು.

andolanait

Recent Posts

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

1 min ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

5 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

5 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

5 hours ago

ತಮಿಳುನಾಡಿಗೆ ನೀರು; 72 ಅಡಿಗೆ ಕುಸಿದ ಕಬಿನಿ ಜಲಾಶಯ

ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ  ಎಚ್.ಡಿ.ಕೋಟೆ: ಈ ಬಾರಿ…

5 hours ago

ಮೇವಿನ ಕೊರತೆ; ಹಸಿರು ಮೇವು ಖರೀದಿಗೆ ಮುಂದಾದ ರೈತರು

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…

5 hours ago