ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ.
ರಾಷ್ಟ್ರರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ದೆಹಲಿ ಸರ್ಕಾರವೇ ನಿಯಂತ್ರಣ ಹೊಂದಿರಬೇಕು. ಚುನಾಯಿತ ಸರ್ಕಾರ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಹೊಂದಿರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಒಮ್ಮತದ ತೀರ್ಪಿನಲ್ಲಿ ತಿಳಿಸಿದೆ.
ಸಾಂವಿಧಾನಿಕ ಪೀಠದಲ್ಲಿ ಸಿಜೆಐ ಹಾಗೂ ಜಸ್ಟೀಸ್ ಎಂಆರ್ ಶಾ, ಜಸ್ಟೀಸ್ ಕೃಷ್ಣಾಮೂರ್ತಿ, ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಪಿಎಸ್ ನರಸಿಂಹ ಅವರನ್ನೊಳಗೊಂಡಿದ್ದು, ಸೇವೆಗಳ ವಿಚಾರದಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂಬ 2019ರ ಜಸ್ಟೀಸ್ ಅಶೋಕ್ ಭೂಷಣ್ ಅವರ ತೀರ್ಪನ್ನು ಒಪ್ಪಲು ನಿರಾಕರಿಸಿದೆ.
ಪ್ರಜಾಪ್ರಭುತ್ವ ಮತ್ತು ಫೆಡರಲ್ ವ್ಯವಸ್ಥೆ ಸಾಂವಿಧಾನಿಕ ವ್ಯವಸ್ಥೆಯ ಮೂಲಭೂತ ಭಾಗವಾಗಿದೆ ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…