ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ.
ರಾಷ್ಟ್ರರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ದೆಹಲಿ ಸರ್ಕಾರವೇ ನಿಯಂತ್ರಣ ಹೊಂದಿರಬೇಕು. ಚುನಾಯಿತ ಸರ್ಕಾರ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಹೊಂದಿರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಒಮ್ಮತದ ತೀರ್ಪಿನಲ್ಲಿ ತಿಳಿಸಿದೆ.
ಸಾಂವಿಧಾನಿಕ ಪೀಠದಲ್ಲಿ ಸಿಜೆಐ ಹಾಗೂ ಜಸ್ಟೀಸ್ ಎಂಆರ್ ಶಾ, ಜಸ್ಟೀಸ್ ಕೃಷ್ಣಾಮೂರ್ತಿ, ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಪಿಎಸ್ ನರಸಿಂಹ ಅವರನ್ನೊಳಗೊಂಡಿದ್ದು, ಸೇವೆಗಳ ವಿಚಾರದಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂಬ 2019ರ ಜಸ್ಟೀಸ್ ಅಶೋಕ್ ಭೂಷಣ್ ಅವರ ತೀರ್ಪನ್ನು ಒಪ್ಪಲು ನಿರಾಕರಿಸಿದೆ.
ಪ್ರಜಾಪ್ರಭುತ್ವ ಮತ್ತು ಫೆಡರಲ್ ವ್ಯವಸ್ಥೆ ಸಾಂವಿಧಾನಿಕ ವ್ಯವಸ್ಥೆಯ ಮೂಲಭೂತ ಭಾಗವಾಗಿದೆ ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…