ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ.
ರಾಷ್ಟ್ರರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ದೆಹಲಿ ಸರ್ಕಾರವೇ ನಿಯಂತ್ರಣ ಹೊಂದಿರಬೇಕು. ಚುನಾಯಿತ ಸರ್ಕಾರ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಹೊಂದಿರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಒಮ್ಮತದ ತೀರ್ಪಿನಲ್ಲಿ ತಿಳಿಸಿದೆ.
ಸಾಂವಿಧಾನಿಕ ಪೀಠದಲ್ಲಿ ಸಿಜೆಐ ಹಾಗೂ ಜಸ್ಟೀಸ್ ಎಂಆರ್ ಶಾ, ಜಸ್ಟೀಸ್ ಕೃಷ್ಣಾಮೂರ್ತಿ, ಜಸ್ಟೀಸ್ ಹಿಮಾ ಕೊಹ್ಲಿ ಮತ್ತು ಜಸ್ಟೀಸ್ ಪಿಎಸ್ ನರಸಿಂಹ ಅವರನ್ನೊಳಗೊಂಡಿದ್ದು, ಸೇವೆಗಳ ವಿಚಾರದಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂಬ 2019ರ ಜಸ್ಟೀಸ್ ಅಶೋಕ್ ಭೂಷಣ್ ಅವರ ತೀರ್ಪನ್ನು ಒಪ್ಪಲು ನಿರಾಕರಿಸಿದೆ.
ಪ್ರಜಾಪ್ರಭುತ್ವ ಮತ್ತು ಫೆಡರಲ್ ವ್ಯವಸ್ಥೆ ಸಾಂವಿಧಾನಿಕ ವ್ಯವಸ್ಥೆಯ ಮೂಲಭೂತ ಭಾಗವಾಗಿದೆ ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…