BREAKING NEWS

ದೆಹಲಿ v/s ಕೇಂದ್ರ ಸರ್ಕಾರ| ಚುನಾಯಿತ ಸರ್ಕಾರಕ್ಕೆ ಆಡಳಿತದ ಮೇಲೆ ಅಧಿಕಾರ: ಸುಪ್ರೀಂ ತೀರ್ಪು

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ.

ರಾಷ್ಟ್ರರಾಜಧಾನಿಯಲ್ಲಿ ಆಡಳಿತಾತ್ಮಕ ಸೇವೆಯಲ್ಲಿ ದೆಹಲಿ ಸರ್ಕಾರವೇ ನಿಯಂತ್ರಣ ಹೊಂದಿರಬೇಕು. ಚುನಾಯಿತ ಸರ್ಕಾರ ಆಡಳಿತ ಸೇವೆಗಳ ಮೇಲೆ ನಿಯಂತ್ರಣ ಹೊಂದಿರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್‌ ನ ಸಿಜೆಐ ಡಿವೈ ಚಂದ್ರಚೂಡ್‌ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ ಒಮ್ಮತದ ತೀರ್ಪಿನಲ್ಲಿ ತಿಳಿಸಿದೆ.

ಸಾಂವಿಧಾನಿಕ ಪೀಠದಲ್ಲಿ ಸಿಜೆಐ ಹಾಗೂ ಜಸ್ಟೀಸ್‌ ಎಂಆರ್‌ ಶಾ, ಜಸ್ಟೀಸ್‌ ಕೃಷ್ಣಾಮೂರ್ತಿ, ಜಸ್ಟೀಸ್‌ ಹಿಮಾ ಕೊಹ್ಲಿ ಮತ್ತು ಜಸ್ಟೀಸ್‌ ಪಿಎಸ್‌ ನರಸಿಂಹ ಅವರನ್ನೊಳಗೊಂಡಿದ್ದು, ಸೇವೆಗಳ ವಿಚಾರದಲ್ಲಿ ದೆಹಲಿ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂಬ 2019ರ ಜಸ್ಟೀಸ್‌ ಅಶೋಕ್‌ ಭೂಷಣ್‌ ಅವರ ತೀರ್ಪನ್ನು ಒಪ್ಪಲು ನಿರಾಕರಿಸಿದೆ.

ಪ್ರಜಾಪ್ರಭುತ್ವ ಮತ್ತು ಫೆಡರಲ್‌ ವ್ಯವಸ್ಥೆ ಸಾಂವಿಧಾನಿಕ ವ್ಯವಸ್ಥೆಯ ಮೂಲಭೂತ ಭಾಗವಾಗಿದೆ ಎಂದು ಸಾಂವಿಧಾನಿಕ ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

15 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

15 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

15 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

15 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

15 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

15 hours ago