BREAKING NEWS

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ಡೆಲಾಯ್ಟ್‌ ರಾಜೀನಾಮೆ

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ ಸ್ವತಂತ್ರವಾಗಿ ಪರಿಶೀಲಿಸಲು ಬಯಸುತ್ತಿಲ್ಲ ಎಂಬುದೇ ಡೆಲಾಯ್ಟ್‌ ರಾಜೀನಾಮೆಗೆ ಕಾರಣ ಎಂದು ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಗಳು ಹೇಳಿದ್ದಾರೆ.

ಮೇ ತಿಂಗಳಲ್ಲಿ ಡೆಲಾಯ್ಟ್ ತನ್ನ ವರದಿಯಲ್ಲಿ ಅಮೆರಿಕದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ ಉಲ್ಲೇಖಿಸಿದ ಕೆಲವು ವಹಿವಾಟುಗಳ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿ, ಸ್ವತಂತ್ರ ತನಿಖೆಗೆ ಸೂಚಿಸಿತ್ತು. ಈ ಮೂಲಕ ಕಂಪನಿಯ ಲೆಕ್ಕಪರಿಶೋಧಕನಾಗಿ ತನ್ನ ಕಾಳಜಿ ಮೆರೆದಿತ್ತು.

ಆದರೆ, ಈ ಬಗ್ಗೆ ರಾಯ್ಟರ್ಸ್‌ ಪ್ರತಿಕ್ರಿಯೆ ಕೋರಿದಾಗ ಡೆಲಾಯ್ಟ್ ಮತ್ತು ಅದಾನಿ ಪೋರ್ಟ್ಸ್‌ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯು ಅದಾನಿ ಕಂಪನಿಗಳಿಂದ ತೆರಿಗೆ ಸ್ವರ್ಗಗಳ ಅನುಚಿತ ಬಳಕೆ ಮತ್ತು ಕಂಪನಿಯ ಸಾಲದ ಮಟ್ಟಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಆದರೆ ಈ ವರದಿಗಳನ್ನು ಸಂಸ್ಥೆ ನಿರಾಕರಿಸಿದೆ.

ಹಿಂಡೆನ್‌ಬರ್ಗ್ ಉಲ್ಲೇಖಿಸಿದ ಸಂಬಂಧಿತ ವಹಿವಾಟಿನ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಡೆಲಾಯ್ಟ್ ಅದಾನಿ ಪೋರ್ಟ್ಸ್‌ಗೆ ಸೂಚಿಸಿದ ನಂತರ ರಾಜೀನಾಮೆ ಸುದ್ದಿ ಹೊರಬಿದ್ದಿದೆ. ಆದರೆ, ಕಂಪನಿಯು ಸ್ವತಂತ್ರ ತನಿಖೆಗೆ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ.

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಹುದ್ದೆಗೆ ತುರ್ತಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದ್ದು, ಡೆಲಾಯ್ಟ್ ಸೋಮವಾರವೇ ತನ್ನ ನಿರ್ಧಾರ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯು ಹೂಡಿಕೆದಾರರ ವಿಶ್ವಾಸವನ್ನು ಜರ್ಝರಿತಗೊಳಿಸಿತ್ತು. ಇದರಿಂದ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಸುಮಾರು 150 ಬಿಲಿಯನ್‌ ಡಾಲರ್‌ಗಳಷ್ಟು ಕುಸಿತ ಕಂಡಿತ್ತು.

ಆದರೆ, ನಂತರ ಸಮೂಹದ ಕಂಪನಿಗಳ ಷೇರುಗಳು ಗಳಿಕೆ ಕಂಡಿವೆ. ಹೀಗಿದ್ದೂ ಹಿಂಡೆನ್‌ಬರ್ಗ್‌ ರಿಸರ್ಚ್‌ನ ವರದಿಯ ನಂತರ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಇನ್ನೂ ಸುಮಾರು 100 ಬಿಲಿಯನ್‌ ಡಾಲರ್‌ಗಳಷ್ಟು ಕಡಿಮೆಯೇ ಇದೆ.

ಮೇ ತಿಂಗಳಲ್ಲಿ ನ್ಯಾಯಾಲಯವು ನೇಮಿಸಿದ ಸಮಿತಿಯು ಅದಾನಿ ಗುಂಪಿನ ವಿರುದ್ಧದ ಆರೋಪಗಳ ತನಿಖೆಯಲ್ಲಿ ಭಾರತದ ಮಾರುಕಟ್ಟೆಗಳ ಕಾವಲು ಸಂಸ್ಥೆ ಸೆಬಿಗೆ ಏನೂ ಸಿಕ್ಕಿಲ್ಲ. ಪ್ರಕರಣದ ಬಗೆಗಿನ ಅದರ ತನಿಖೆ ‘ಗಮ್ಯಸ್ಥಾನವಿಲ್ಲದ ಪ್ರಯಾಣ’ ಆಗಿರಬಹುದು ಎಂದು ಹೇಳಿತ್ತು.

ಬ್ಲೂಮ್‌ಬರ್ಗ್ ನ್ಯೂಸ್ ಶುಕ್ರವಾರ ಡೆಲಾಯ್ಟ್‌ನ ಯೋಜನೆಗಳ ಬಗ್ಗೆ ಮೊದಲು ವರದಿ ಮಾಡಿತ್ತು.

andolanait

Recent Posts

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಹರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

21 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

3 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

3 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

4 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

4 hours ago

ತರುಣ ತಲೆಮಾರಿನ ಕೈಯಲ್ಲಿ ನೆರೆಯ ನೇಪಾಳದ ಚುಕ್ಕಾಣಿ…

ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…

4 hours ago