BREAKING NEWS

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ಡೆಲಾಯ್ಟ್‌ ರಾಜೀನಾಮೆ

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ ಸ್ವತಂತ್ರವಾಗಿ ಪರಿಶೀಲಿಸಲು ಬಯಸುತ್ತಿಲ್ಲ ಎಂಬುದೇ ಡೆಲಾಯ್ಟ್‌ ರಾಜೀನಾಮೆಗೆ ಕಾರಣ ಎಂದು ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಗಳು ಹೇಳಿದ್ದಾರೆ.

ಮೇ ತಿಂಗಳಲ್ಲಿ ಡೆಲಾಯ್ಟ್ ತನ್ನ ವರದಿಯಲ್ಲಿ ಅಮೆರಿಕದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ ಉಲ್ಲೇಖಿಸಿದ ಕೆಲವು ವಹಿವಾಟುಗಳ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿ, ಸ್ವತಂತ್ರ ತನಿಖೆಗೆ ಸೂಚಿಸಿತ್ತು. ಈ ಮೂಲಕ ಕಂಪನಿಯ ಲೆಕ್ಕಪರಿಶೋಧಕನಾಗಿ ತನ್ನ ಕಾಳಜಿ ಮೆರೆದಿತ್ತು.

ಆದರೆ, ಈ ಬಗ್ಗೆ ರಾಯ್ಟರ್ಸ್‌ ಪ್ರತಿಕ್ರಿಯೆ ಕೋರಿದಾಗ ಡೆಲಾಯ್ಟ್ ಮತ್ತು ಅದಾನಿ ಪೋರ್ಟ್ಸ್‌ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯು ಅದಾನಿ ಕಂಪನಿಗಳಿಂದ ತೆರಿಗೆ ಸ್ವರ್ಗಗಳ ಅನುಚಿತ ಬಳಕೆ ಮತ್ತು ಕಂಪನಿಯ ಸಾಲದ ಮಟ್ಟಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಆದರೆ ಈ ವರದಿಗಳನ್ನು ಸಂಸ್ಥೆ ನಿರಾಕರಿಸಿದೆ.

ಹಿಂಡೆನ್‌ಬರ್ಗ್ ಉಲ್ಲೇಖಿಸಿದ ಸಂಬಂಧಿತ ವಹಿವಾಟಿನ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಡೆಲಾಯ್ಟ್ ಅದಾನಿ ಪೋರ್ಟ್ಸ್‌ಗೆ ಸೂಚಿಸಿದ ನಂತರ ರಾಜೀನಾಮೆ ಸುದ್ದಿ ಹೊರಬಿದ್ದಿದೆ. ಆದರೆ, ಕಂಪನಿಯು ಸ್ವತಂತ್ರ ತನಿಖೆಗೆ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ.

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಹುದ್ದೆಗೆ ತುರ್ತಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದ್ದು, ಡೆಲಾಯ್ಟ್ ಸೋಮವಾರವೇ ತನ್ನ ನಿರ್ಧಾರ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯು ಹೂಡಿಕೆದಾರರ ವಿಶ್ವಾಸವನ್ನು ಜರ್ಝರಿತಗೊಳಿಸಿತ್ತು. ಇದರಿಂದ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಸುಮಾರು 150 ಬಿಲಿಯನ್‌ ಡಾಲರ್‌ಗಳಷ್ಟು ಕುಸಿತ ಕಂಡಿತ್ತು.

ಆದರೆ, ನಂತರ ಸಮೂಹದ ಕಂಪನಿಗಳ ಷೇರುಗಳು ಗಳಿಕೆ ಕಂಡಿವೆ. ಹೀಗಿದ್ದೂ ಹಿಂಡೆನ್‌ಬರ್ಗ್‌ ರಿಸರ್ಚ್‌ನ ವರದಿಯ ನಂತರ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಇನ್ನೂ ಸುಮಾರು 100 ಬಿಲಿಯನ್‌ ಡಾಲರ್‌ಗಳಷ್ಟು ಕಡಿಮೆಯೇ ಇದೆ.

ಮೇ ತಿಂಗಳಲ್ಲಿ ನ್ಯಾಯಾಲಯವು ನೇಮಿಸಿದ ಸಮಿತಿಯು ಅದಾನಿ ಗುಂಪಿನ ವಿರುದ್ಧದ ಆರೋಪಗಳ ತನಿಖೆಯಲ್ಲಿ ಭಾರತದ ಮಾರುಕಟ್ಟೆಗಳ ಕಾವಲು ಸಂಸ್ಥೆ ಸೆಬಿಗೆ ಏನೂ ಸಿಕ್ಕಿಲ್ಲ. ಪ್ರಕರಣದ ಬಗೆಗಿನ ಅದರ ತನಿಖೆ ‘ಗಮ್ಯಸ್ಥಾನವಿಲ್ಲದ ಪ್ರಯಾಣ’ ಆಗಿರಬಹುದು ಎಂದು ಹೇಳಿತ್ತು.

ಬ್ಲೂಮ್‌ಬರ್ಗ್ ನ್ಯೂಸ್ ಶುಕ್ರವಾರ ಡೆಲಾಯ್ಟ್‌ನ ಯೋಜನೆಗಳ ಬಗ್ಗೆ ಮೊದಲು ವರದಿ ಮಾಡಿತ್ತು.

andolanait

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

27 seconds ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

9 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

19 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

24 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

34 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

43 mins ago