BREAKING NEWS

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ಡೆಲಾಯ್ಟ್‌ ರಾಜೀನಾಮೆ

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ ಸ್ವತಂತ್ರವಾಗಿ ಪರಿಶೀಲಿಸಲು ಬಯಸುತ್ತಿಲ್ಲ ಎಂಬುದೇ ಡೆಲಾಯ್ಟ್‌ ರಾಜೀನಾಮೆಗೆ ಕಾರಣ ಎಂದು ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಗಳು ಹೇಳಿದ್ದಾರೆ.

ಮೇ ತಿಂಗಳಲ್ಲಿ ಡೆಲಾಯ್ಟ್ ತನ್ನ ವರದಿಯಲ್ಲಿ ಅಮೆರಿಕದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ ಉಲ್ಲೇಖಿಸಿದ ಕೆಲವು ವಹಿವಾಟುಗಳ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿ, ಸ್ವತಂತ್ರ ತನಿಖೆಗೆ ಸೂಚಿಸಿತ್ತು. ಈ ಮೂಲಕ ಕಂಪನಿಯ ಲೆಕ್ಕಪರಿಶೋಧಕನಾಗಿ ತನ್ನ ಕಾಳಜಿ ಮೆರೆದಿತ್ತು.

ಆದರೆ, ಈ ಬಗ್ಗೆ ರಾಯ್ಟರ್ಸ್‌ ಪ್ರತಿಕ್ರಿಯೆ ಕೋರಿದಾಗ ಡೆಲಾಯ್ಟ್ ಮತ್ತು ಅದಾನಿ ಪೋರ್ಟ್ಸ್‌ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯು ಅದಾನಿ ಕಂಪನಿಗಳಿಂದ ತೆರಿಗೆ ಸ್ವರ್ಗಗಳ ಅನುಚಿತ ಬಳಕೆ ಮತ್ತು ಕಂಪನಿಯ ಸಾಲದ ಮಟ್ಟಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಆದರೆ ಈ ವರದಿಗಳನ್ನು ಸಂಸ್ಥೆ ನಿರಾಕರಿಸಿದೆ.

ಹಿಂಡೆನ್‌ಬರ್ಗ್ ಉಲ್ಲೇಖಿಸಿದ ಸಂಬಂಧಿತ ವಹಿವಾಟಿನ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಡೆಲಾಯ್ಟ್ ಅದಾನಿ ಪೋರ್ಟ್ಸ್‌ಗೆ ಸೂಚಿಸಿದ ನಂತರ ರಾಜೀನಾಮೆ ಸುದ್ದಿ ಹೊರಬಿದ್ದಿದೆ. ಆದರೆ, ಕಂಪನಿಯು ಸ್ವತಂತ್ರ ತನಿಖೆಗೆ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ.

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಹುದ್ದೆಗೆ ತುರ್ತಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದ್ದು, ಡೆಲಾಯ್ಟ್ ಸೋಮವಾರವೇ ತನ್ನ ನಿರ್ಧಾರ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯು ಹೂಡಿಕೆದಾರರ ವಿಶ್ವಾಸವನ್ನು ಜರ್ಝರಿತಗೊಳಿಸಿತ್ತು. ಇದರಿಂದ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಸುಮಾರು 150 ಬಿಲಿಯನ್‌ ಡಾಲರ್‌ಗಳಷ್ಟು ಕುಸಿತ ಕಂಡಿತ್ತು.

ಆದರೆ, ನಂತರ ಸಮೂಹದ ಕಂಪನಿಗಳ ಷೇರುಗಳು ಗಳಿಕೆ ಕಂಡಿವೆ. ಹೀಗಿದ್ದೂ ಹಿಂಡೆನ್‌ಬರ್ಗ್‌ ರಿಸರ್ಚ್‌ನ ವರದಿಯ ನಂತರ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಇನ್ನೂ ಸುಮಾರು 100 ಬಿಲಿಯನ್‌ ಡಾಲರ್‌ಗಳಷ್ಟು ಕಡಿಮೆಯೇ ಇದೆ.

ಮೇ ತಿಂಗಳಲ್ಲಿ ನ್ಯಾಯಾಲಯವು ನೇಮಿಸಿದ ಸಮಿತಿಯು ಅದಾನಿ ಗುಂಪಿನ ವಿರುದ್ಧದ ಆರೋಪಗಳ ತನಿಖೆಯಲ್ಲಿ ಭಾರತದ ಮಾರುಕಟ್ಟೆಗಳ ಕಾವಲು ಸಂಸ್ಥೆ ಸೆಬಿಗೆ ಏನೂ ಸಿಕ್ಕಿಲ್ಲ. ಪ್ರಕರಣದ ಬಗೆಗಿನ ಅದರ ತನಿಖೆ ‘ಗಮ್ಯಸ್ಥಾನವಿಲ್ಲದ ಪ್ರಯಾಣ’ ಆಗಿರಬಹುದು ಎಂದು ಹೇಳಿತ್ತು.

ಬ್ಲೂಮ್‌ಬರ್ಗ್ ನ್ಯೂಸ್ ಶುಕ್ರವಾರ ಡೆಲಾಯ್ಟ್‌ನ ಯೋಜನೆಗಳ ಬಗ್ಗೆ ಮೊದಲು ವರದಿ ಮಾಡಿತ್ತು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago