BREAKING NEWS

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ಡೆಲಾಯ್ಟ್‌ ರಾಜೀನಾಮೆ

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ ಸ್ವತಂತ್ರವಾಗಿ ಪರಿಶೀಲಿಸಲು ಬಯಸುತ್ತಿಲ್ಲ ಎಂಬುದೇ ಡೆಲಾಯ್ಟ್‌ ರಾಜೀನಾಮೆಗೆ ಕಾರಣ ಎಂದು ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಗಳು ಹೇಳಿದ್ದಾರೆ.

ಮೇ ತಿಂಗಳಲ್ಲಿ ಡೆಲಾಯ್ಟ್ ತನ್ನ ವರದಿಯಲ್ಲಿ ಅಮೆರಿಕದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ ಉಲ್ಲೇಖಿಸಿದ ಕೆಲವು ವಹಿವಾಟುಗಳ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿ, ಸ್ವತಂತ್ರ ತನಿಖೆಗೆ ಸೂಚಿಸಿತ್ತು. ಈ ಮೂಲಕ ಕಂಪನಿಯ ಲೆಕ್ಕಪರಿಶೋಧಕನಾಗಿ ತನ್ನ ಕಾಳಜಿ ಮೆರೆದಿತ್ತು.

ಆದರೆ, ಈ ಬಗ್ಗೆ ರಾಯ್ಟರ್ಸ್‌ ಪ್ರತಿಕ್ರಿಯೆ ಕೋರಿದಾಗ ಡೆಲಾಯ್ಟ್ ಮತ್ತು ಅದಾನಿ ಪೋರ್ಟ್ಸ್‌ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯು ಅದಾನಿ ಕಂಪನಿಗಳಿಂದ ತೆರಿಗೆ ಸ್ವರ್ಗಗಳ ಅನುಚಿತ ಬಳಕೆ ಮತ್ತು ಕಂಪನಿಯ ಸಾಲದ ಮಟ್ಟಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಆದರೆ ಈ ವರದಿಗಳನ್ನು ಸಂಸ್ಥೆ ನಿರಾಕರಿಸಿದೆ.

ಹಿಂಡೆನ್‌ಬರ್ಗ್ ಉಲ್ಲೇಖಿಸಿದ ಸಂಬಂಧಿತ ವಹಿವಾಟಿನ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಡೆಲಾಯ್ಟ್ ಅದಾನಿ ಪೋರ್ಟ್ಸ್‌ಗೆ ಸೂಚಿಸಿದ ನಂತರ ರಾಜೀನಾಮೆ ಸುದ್ದಿ ಹೊರಬಿದ್ದಿದೆ. ಆದರೆ, ಕಂಪನಿಯು ಸ್ವತಂತ್ರ ತನಿಖೆಗೆ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ.

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಹುದ್ದೆಗೆ ತುರ್ತಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದ್ದು, ಡೆಲಾಯ್ಟ್ ಸೋಮವಾರವೇ ತನ್ನ ನಿರ್ಧಾರ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯು ಹೂಡಿಕೆದಾರರ ವಿಶ್ವಾಸವನ್ನು ಜರ್ಝರಿತಗೊಳಿಸಿತ್ತು. ಇದರಿಂದ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಸುಮಾರು 150 ಬಿಲಿಯನ್‌ ಡಾಲರ್‌ಗಳಷ್ಟು ಕುಸಿತ ಕಂಡಿತ್ತು.

ಆದರೆ, ನಂತರ ಸಮೂಹದ ಕಂಪನಿಗಳ ಷೇರುಗಳು ಗಳಿಕೆ ಕಂಡಿವೆ. ಹೀಗಿದ್ದೂ ಹಿಂಡೆನ್‌ಬರ್ಗ್‌ ರಿಸರ್ಚ್‌ನ ವರದಿಯ ನಂತರ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಇನ್ನೂ ಸುಮಾರು 100 ಬಿಲಿಯನ್‌ ಡಾಲರ್‌ಗಳಷ್ಟು ಕಡಿಮೆಯೇ ಇದೆ.

ಮೇ ತಿಂಗಳಲ್ಲಿ ನ್ಯಾಯಾಲಯವು ನೇಮಿಸಿದ ಸಮಿತಿಯು ಅದಾನಿ ಗುಂಪಿನ ವಿರುದ್ಧದ ಆರೋಪಗಳ ತನಿಖೆಯಲ್ಲಿ ಭಾರತದ ಮಾರುಕಟ್ಟೆಗಳ ಕಾವಲು ಸಂಸ್ಥೆ ಸೆಬಿಗೆ ಏನೂ ಸಿಕ್ಕಿಲ್ಲ. ಪ್ರಕರಣದ ಬಗೆಗಿನ ಅದರ ತನಿಖೆ ‘ಗಮ್ಯಸ್ಥಾನವಿಲ್ಲದ ಪ್ರಯಾಣ’ ಆಗಿರಬಹುದು ಎಂದು ಹೇಳಿತ್ತು.

ಬ್ಲೂಮ್‌ಬರ್ಗ್ ನ್ಯೂಸ್ ಶುಕ್ರವಾರ ಡೆಲಾಯ್ಟ್‌ನ ಯೋಜನೆಗಳ ಬಗ್ಗೆ ಮೊದಲು ವರದಿ ಮಾಡಿತ್ತು.

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

9 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

15 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

18 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago