BREAKING NEWS

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ಡೆಲಾಯ್ಟ್‌ ರಾಜೀನಾಮೆ

ಹಿಂಡೆನ್‌ಬರ್ಗ್‌ನ ವರದಿಯಲ್ಲಿ ಉಲ್ಲೇಖಿಸಿದ ಕೆಲವು ವಹಿವಾಟುಗಳ ವಿಚಾರವನ್ನು ಮುಂದಿಟ್ಟುಕೊಂಡು ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಸ್ಥಾನಕ್ಕೆ ರಾಜೀನಾಮೆ ನೀಡಲು ಡೆಲಾಯ್ಟ್ ನಿರ್ಧರಿಸಿದೆ. ಹಿಂಡನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಿದ ಅಂಶಗಳನ್ನು ಅದಾನಿ ಸ್ವತಂತ್ರವಾಗಿ ಪರಿಶೀಲಿಸಲು ಬಯಸುತ್ತಿಲ್ಲ ಎಂಬುದೇ ಡೆಲಾಯ್ಟ್‌ ರಾಜೀನಾಮೆಗೆ ಕಾರಣ ಎಂದು ಈ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಗಳು ಹೇಳಿದ್ದಾರೆ.

ಮೇ ತಿಂಗಳಲ್ಲಿ ಡೆಲಾಯ್ಟ್ ತನ್ನ ವರದಿಯಲ್ಲಿ ಅಮೆರಿಕದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ ಉಲ್ಲೇಖಿಸಿದ ಕೆಲವು ವಹಿವಾಟುಗಳ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿ, ಸ್ವತಂತ್ರ ತನಿಖೆಗೆ ಸೂಚಿಸಿತ್ತು. ಈ ಮೂಲಕ ಕಂಪನಿಯ ಲೆಕ್ಕಪರಿಶೋಧಕನಾಗಿ ತನ್ನ ಕಾಳಜಿ ಮೆರೆದಿತ್ತು.

ಆದರೆ, ಈ ಬಗ್ಗೆ ರಾಯ್ಟರ್ಸ್‌ ಪ್ರತಿಕ್ರಿಯೆ ಕೋರಿದಾಗ ಡೆಲಾಯ್ಟ್ ಮತ್ತು ಅದಾನಿ ಪೋರ್ಟ್ಸ್‌ ತಕ್ಷಣ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವರ್ಷದ ಜನವರಿಯಲ್ಲಿ ಬಿಡುಗಡೆಯಾದ ಶಾರ್ಟ್‌ ಸೆಲ್ಲರ್‌ ಹಿಂಡನ್‌ಬರ್ಗ್‌ ರಿಸರ್ಚ್‌ನ ವರದಿಯು ಅದಾನಿ ಕಂಪನಿಗಳಿಂದ ತೆರಿಗೆ ಸ್ವರ್ಗಗಳ ಅನುಚಿತ ಬಳಕೆ ಮತ್ತು ಕಂಪನಿಯ ಸಾಲದ ಮಟ್ಟಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಆದರೆ ಈ ವರದಿಗಳನ್ನು ಸಂಸ್ಥೆ ನಿರಾಕರಿಸಿದೆ.

ಹಿಂಡೆನ್‌ಬರ್ಗ್ ಉಲ್ಲೇಖಿಸಿದ ಸಂಬಂಧಿತ ವಹಿವಾಟಿನ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಡೆಲಾಯ್ಟ್ ಅದಾನಿ ಪೋರ್ಟ್ಸ್‌ಗೆ ಸೂಚಿಸಿದ ನಂತರ ರಾಜೀನಾಮೆ ಸುದ್ದಿ ಹೊರಬಿದ್ದಿದೆ. ಆದರೆ, ಕಂಪನಿಯು ಸ್ವತಂತ್ರ ತನಿಖೆಗೆ ಒಪ್ಪಲಿಲ್ಲ ಎಂದು ಮೂಲಗಳು ತಿಳಿಸಿವೆ.

ಅದಾನಿ ಪೋರ್ಟ್ಸ್‌ ಲೆಕ್ಕಪರಿಶೋಧಕ ಹುದ್ದೆಗೆ ತುರ್ತಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದ್ದು, ಡೆಲಾಯ್ಟ್ ಸೋಮವಾರವೇ ತನ್ನ ನಿರ್ಧಾರ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯು ಹೂಡಿಕೆದಾರರ ವಿಶ್ವಾಸವನ್ನು ಜರ್ಝರಿತಗೊಳಿಸಿತ್ತು. ಇದರಿಂದ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಸುಮಾರು 150 ಬಿಲಿಯನ್‌ ಡಾಲರ್‌ಗಳಷ್ಟು ಕುಸಿತ ಕಂಡಿತ್ತು.

ಆದರೆ, ನಂತರ ಸಮೂಹದ ಕಂಪನಿಗಳ ಷೇರುಗಳು ಗಳಿಕೆ ಕಂಡಿವೆ. ಹೀಗಿದ್ದೂ ಹಿಂಡೆನ್‌ಬರ್ಗ್‌ ರಿಸರ್ಚ್‌ನ ವರದಿಯ ನಂತರ ಅದಾನಿ ಸಮೂಹದ ಕಂಪನಿಗಳ ಮಾರುಕಟ್ಟೆ ಮೌಲ್ಯ ಇನ್ನೂ ಸುಮಾರು 100 ಬಿಲಿಯನ್‌ ಡಾಲರ್‌ಗಳಷ್ಟು ಕಡಿಮೆಯೇ ಇದೆ.

ಮೇ ತಿಂಗಳಲ್ಲಿ ನ್ಯಾಯಾಲಯವು ನೇಮಿಸಿದ ಸಮಿತಿಯು ಅದಾನಿ ಗುಂಪಿನ ವಿರುದ್ಧದ ಆರೋಪಗಳ ತನಿಖೆಯಲ್ಲಿ ಭಾರತದ ಮಾರುಕಟ್ಟೆಗಳ ಕಾವಲು ಸಂಸ್ಥೆ ಸೆಬಿಗೆ ಏನೂ ಸಿಕ್ಕಿಲ್ಲ. ಪ್ರಕರಣದ ಬಗೆಗಿನ ಅದರ ತನಿಖೆ ‘ಗಮ್ಯಸ್ಥಾನವಿಲ್ಲದ ಪ್ರಯಾಣ’ ಆಗಿರಬಹುದು ಎಂದು ಹೇಳಿತ್ತು.

ಬ್ಲೂಮ್‌ಬರ್ಗ್ ನ್ಯೂಸ್ ಶುಕ್ರವಾರ ಡೆಲಾಯ್ಟ್‌ನ ಯೋಜನೆಗಳ ಬಗ್ಗೆ ಮೊದಲು ವರದಿ ಮಾಡಿತ್ತು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

2 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago