BREAKING NEWS

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.

ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ

ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ‘ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ.  ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago