BREAKING NEWS

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.

ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ

ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ‘ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ.  ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.

andolanait

Recent Posts

ಮುಡಾ ಕಚೇರಿಯಲ್ಲಿ ಇಂದು ಕೂಡ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅಧಿಕಾರಿಗಳು ಇಂದು ಕೂಡ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದು, ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್‌ ಹಾಕಲಾಗಿದೆ.…

9 mins ago

ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ನಾಗೇಂದ್ರ ಎಂಬುವವರು…

31 mins ago

ಕಪಿಲಾ ನದಿಗೆ ಮತ್ತೊಂದು ಸೇತುವೆ

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ…

54 mins ago

ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಸಂಕಷ್ಟ

ಮೈಸೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಭಾರೀ ಸಂಕಷ್ಟ ಎದುರಾಗಿದೆ ಎಂಬ ಮಾಹಿತಿ…

59 mins ago

ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ…

1 hour ago

ನಿಜ್ಜರ್ ಹತ್ಯೆ ಪ್ರತಿಧ್ವನಿ-ಕೆನಡಾ ಭಾರತೀಯರಲ್ಲಿ ಆತಂಕ

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ…

2 hours ago