BREAKING NEWS

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.

ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ

ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ‘ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ.  ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

7 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

7 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

7 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

7 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

7 hours ago