BREAKING NEWS

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.

ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ

ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ‘ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ.  ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.

andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

8 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

11 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

12 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

12 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

18 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

18 hours ago