BREAKING NEWS

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.

ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ

ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ‘ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ.  ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago