BREAKING NEWS

ಮಣಿಪುರ ಕುರಿತು ಪ್ರಧಾನಿ ಹೇಳಿಕೆಗೆ ಒತ್ತಾಯ: ಸೋಮವಾರ ಸಂಸತ್ತಿನ ಆವರಣದಲ್ಲಿ ವಿಪಕ್ಷ ನಾಯಕರಿಂದ ಪ್ರತಿಭಟನೆ

ನವದೆಹಲಿ: ಮಣಿಪುರದಲ್ಲಿನ ಹಿಂಸಾಚಾರದ ಕುರಿತು ಚರ್ಚೆ ನಡೆಸಲು ಸಂಸತ್ತಿನಲ್ಲಿ ಉಂಟಾಗಿರುವ ಸಂಘರ್ಷದ ನಡುವೆಯೇ ಉಭಯ ಸದನಗಳಲ್ಲಿ ಪ್ರಧಾನಿ ಮೋದಿ ಈ ಕುರಿತು ಹೇಳಿಕೆ ನೀಡುವಂತೆ ಒತ್ತಾಯಿಸಿ ವಿವಿಧ ವಿರೋಧ ಪಕ್ಷಗಳ ಸಂಸದರು ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇತ್ತೀಚೆಗಷ್ಟೇ ಇಂಡಿಯಾ (INDIA) ಮೈತ್ರಿಕೂಟ ರಚನೆ ಮಾಡಿಕೊಂಡಿರುವ ವಿಪಕ್ಷಗಳು ಇದೀಗ ಅದೇ ಒಕ್ಕೂಟದ ಅಡಿಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಸಾಮೂಹಿಕ ಪ್ರತಿಭಟನೆಗೆ ಮುಂದಾಗಿವೆ. ವಿವಿಧ ವಿರೋಧ ಪಕ್ಷಗಳ ನಾಯಕರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ ಮತ್ತು ಸಂಸತ್ತಿನಲ್ಲಿ ತಮ್ಮ ಮುಂದಿನ ಕಾರ್ಯತಂತ್ರವನ್ನು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ ಜುಲೈ 24, ಸೋಮವಾರ ಬೆಳಿಗ್ಗೆ 10 ಗಂಟೆಗೆ ಸಭೆಯ ನಂತರ, ನಾಯಕರು ಉಭಯ ಸದನಗಳಿಗೆ ಪ್ರವೇಶಿಸುವ ಮೊದಲು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಿದ್ದಾರೆ. ಮಣಿಪುರ ಸಮಸ್ಯೆಯ ಕುರಿತು ಅಲ್ಪಾವಧಿಯ ಚರ್ಚೆ ನಡೆಸಲು ಸರ್ಕಾರ ಸಮ್ಮತಿಸಿದೆ. ಆದರೆ ಗೃಹ ಸಚಿವರು ಅದಕ್ಕೆ ಉತ್ತರಿಸುತ್ತಾರೆ. ಆದರೆ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಹಲ್ಲೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಮೊದಲು ಪ್ರಧಾನಿ ಹೇಳಿಕೆಗೆ ವಿರೋಧ ಪಕ್ಷಗಳು ಬೇಡಿಕೆ ಇಟ್ಟಿವೆ.

ಅಲ್ಲದೆ, ಯಾವುದೇ ಸಮಯದ ನಿರ್ಬಂಧವಿಲ್ಲದೆ ಎಲ್ಲಾ ಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಚರ್ಚೆಯನ್ನು ಪ್ರತಿಪಕ್ಷಗಳು ಬಯಸುತ್ತಿವೆ ಮತ್ತು ಗುರುವಾರ ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಈ ವಿಷಯದ ಬಗ್ಗೆ ಪ್ರತಿಭಟನೆಗಳನ್ನು ನಡೆಸುತ್ತಿವೆ

ಆದರೆ ವಿಪಕ್ಷಗಳ ಒತ್ತಾಯಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರ, ‘ಎಲ್ಲ ಪ್ರಮುಖ ವಿಷಯದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ. ವಿಚಾರದ ಬಗ್ಗೆ ಅವರ ಗಂಭೀರವಾಗಿದ್ದರೆ ಸದನದಲ್ಲಿ ಪ್ರಶ್ನಿಸಲಿ ಎಂದು ಹೇಳಿದೆ.  ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಮತ್ತು ಸರ್ಕಾರದ ನಡುವಿನ ಹಗ್ಗಜಗ್ಗಾಟದ ನಡುವೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕಲಾಪ ಗಲಾಟೆಗೆ ತುತ್ತಾಗಿ ಯಾವುದೇ ರೀತಿಯ ಸುಗಮ ಕಲಾಪ ನಡೆಸುವುದರಲ್ಲಿ ವಿಫಲವಾಗಿದೆ.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

9 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

13 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

14 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

14 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago