BREAKING NEWS

ಪ್ರತಿಯೊಬ್ಬರೂ ಘನತೆ, ಸಭ್ಯತೆ ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವ ಉಳಿಸಲು ಸಾಧ್ಯ: ಎಚ್‌ಡಿ ದೇವೇಗೌಡ

ಬೆಂಗಳೂರು: ಸಂಸತ್ತಿನ ಕಲಾಪಗಳಲ್ಲಿನ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಹೇಳಿದರು.

ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ 90 ವರ್ಷದ ಜೆಡಿಎಸ್ ವರಿಷ್ಠರು, ಇತ್ತೀಚಿನ ದಿನಗಳಲ್ಲಿ ಸಂಸತ್ತಿನ ಕಲಾಪವನ್ನು ಹಾಳು ಮಾಡುತ್ತಿರುವ ಗದ್ದಲ ಎಬ್ಬಿಸುವುದು, ಹೆಸರು ಕರೆಯುವುದು ಮತ್ತು ಘೋಷಣೆ ಕೂಗುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

‘ಅನಾರೋಗ್ಯದ ಹೊರತಾಗಿಯೂ ನಾನು ಸಂಸತ್ತಿಗೆ ಹಾಜರಾಗಲು ಬಂದಿದ್ದೇನೆ. ಆದರೆ, ಏನು ನಡೆಯುತ್ತಿದೆಯೋ ಅದರ ಬಗ್ಗೆ ತುಂಬಾ ನಿರಾಶೆಗೊಂಡಿದ್ದೇನೆ. ನನ್ನ ಸುದೀರ್ಘ ಅನುಭವದಿಂದ ಹೇಳುವುದಾದರೆ, ಇದೊಂದು ಹೊಸ ನಿರಾಶಾದಾಯಕ ಪ್ರವೃತ್ತಿ ಎಂದು ನಾನು ಹೇಳುತ್ತೇನೆ. ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಬಹುದು’ ಎಂದು ಅವರು ಎಕ್ಸ್‌ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿದ್ದಾರೆ.

‘ಕೂಗಾಡುವುದು, ಹೆಸರು ಕರೆಯುವುದು, ಘೋಷಣೆ ಕೂಗುವುದು ನಮ್ಮ ವ್ಯವಸ್ಥೆಯಲ್ಲಿ ಹಿಂದಿನಿಂದ ಉಳಿದಿರುವ ಪದ್ಧತಿಯನ್ನು ಮಾತ್ರ ನಾಶಪಡಿಸುತ್ತದೆ’ ಎಂದು ಅವರು ಹೇಳಿದರು.

ಪ್ರತಿಪಕ್ಷ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಮಣಿಪುರ ಕುರಿತು ನಿಯಮ 167ರ ಅಡಿಯಲ್ಲಿ ಚರ್ಚೆಗೆ ಮತ್ತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಗೆ ಒತ್ತಾಯಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಆಡಳಿತ ಪಕ್ಷದ ಸದಸ್ಯರು ಖರ್ಗೆ ಅವರ ಬೇಡಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಖರ್ಗೆ, ‘ಪ್ರಧಾನಿ ಸದನಕ್ಕೆ ಬಂದರೆ ಏನಾಗುತ್ತದೆ? ಅವರು ‘ಪರಮಾತ್ಮ’ನಲ್ಲ, ಅವರು ದೇವರಲ್ಲ ಎಂದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರ ಘೋಷಣೆಗಳು ತೀವ್ರಗೊಂಡವು. ಗದ್ದಲದ ನಡುವೆ ಸಭಾಪತಿ ಜಗದೀಪ್ ಧನಕರ್ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

andolanait

Recent Posts

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

15 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

34 mins ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

53 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

1 hour ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

1 hour ago

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

1 hour ago