ಬೆಂಗಳೂರು: ಸಂಸತ್ತಿನ ಕಲಾಪಗಳಲ್ಲಿನ ಅಡೆತಡೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ, ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಲು ಸಾಧ್ಯ ಎಂದು ಹೇಳಿದರು.
ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ 90 ವರ್ಷದ ಜೆಡಿಎಸ್ ವರಿಷ್ಠರು, ಇತ್ತೀಚಿನ ದಿನಗಳಲ್ಲಿ ಸಂಸತ್ತಿನ ಕಲಾಪವನ್ನು ಹಾಳು ಮಾಡುತ್ತಿರುವ ಗದ್ದಲ ಎಬ್ಬಿಸುವುದು, ಹೆಸರು ಕರೆಯುವುದು ಮತ್ತು ಘೋಷಣೆ ಕೂಗುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
‘ಅನಾರೋಗ್ಯದ ಹೊರತಾಗಿಯೂ ನಾನು ಸಂಸತ್ತಿಗೆ ಹಾಜರಾಗಲು ಬಂದಿದ್ದೇನೆ. ಆದರೆ, ಏನು ನಡೆಯುತ್ತಿದೆಯೋ ಅದರ ಬಗ್ಗೆ ತುಂಬಾ ನಿರಾಶೆಗೊಂಡಿದ್ದೇನೆ. ನನ್ನ ಸುದೀರ್ಘ ಅನುಭವದಿಂದ ಹೇಳುವುದಾದರೆ, ಇದೊಂದು ಹೊಸ ನಿರಾಶಾದಾಯಕ ಪ್ರವೃತ್ತಿ ಎಂದು ನಾನು ಹೇಳುತ್ತೇನೆ. ಪ್ರತಿಯೊಬ್ಬರೂ ಘನತೆ ಮತ್ತು ಸಭ್ಯತೆಯನ್ನು ಕಾಪಾಡಿಕೊಂಡರೆ ಮಾತ್ರ ಪ್ರಜಾಪ್ರಭುತ್ವವನ್ನು ಉಳಿಸಬಹುದು’ ಎಂದು ಅವರು ಎಕ್ಸ್ನಲ್ಲಿ (ಟ್ವಿಟರ್) ಪೋಸ್ಟ್ ಮಾಡಿದ್ದಾರೆ.
‘ಕೂಗಾಡುವುದು, ಹೆಸರು ಕರೆಯುವುದು, ಘೋಷಣೆ ಕೂಗುವುದು ನಮ್ಮ ವ್ಯವಸ್ಥೆಯಲ್ಲಿ ಹಿಂದಿನಿಂದ ಉಳಿದಿರುವ ಪದ್ಧತಿಯನ್ನು ಮಾತ್ರ ನಾಶಪಡಿಸುತ್ತದೆ’ ಎಂದು ಅವರು ಹೇಳಿದರು.
ಪ್ರತಿಪಕ್ಷ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ ಅವರು ಮಣಿಪುರ ಕುರಿತು ನಿಯಮ 167ರ ಅಡಿಯಲ್ಲಿ ಚರ್ಚೆಗೆ ಮತ್ತು ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಗೆ ಒತ್ತಾಯಿಸಿದ ನಂತರ ರಾಜ್ಯಸಭೆಯ ಕಲಾಪವನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಆಡಳಿತ ಪಕ್ಷದ ಸದಸ್ಯರು ಖರ್ಗೆ ಅವರ ಬೇಡಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಖರ್ಗೆ, ‘ಪ್ರಧಾನಿ ಸದನಕ್ಕೆ ಬಂದರೆ ಏನಾಗುತ್ತದೆ? ಅವರು ‘ಪರಮಾತ್ಮ’ನಲ್ಲ, ಅವರು ದೇವರಲ್ಲ ಎಂದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರ ಘೋಷಣೆಗಳು ತೀವ್ರಗೊಂಡವು. ಗದ್ದಲದ ನಡುವೆ ಸಭಾಪತಿ ಜಗದೀಪ್ ಧನಕರ್ ಅವರು ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…