ಹೊಸದಿಲ್ಲಿ: ನೂತನ ಸಂಸತ್ ಭವನದ ಉದ್ಘಾಟನೆಯನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಿದ ಬೆನ್ನಲ್ಲೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಜಾಪ್ರಭುತ್ವ ಎಂದರೆ ಕೇವಲ ಕಟ್ಟಡಗಳಲ್ಲ, ಅದು ಜನರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ.
ಜಂತರ್ ಮಂತರ್ನಲ್ಲಿ ಕುಸ್ತಿಪಟುಗಳು ಸಂಸತ್ತಿನತ್ತ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಅವರನ್ನು ಬಲವಂತವಾಗಿ ತಡೆದು ವಶಕ್ಕೆ ಪಡೆದಿರುವ ಮತ್ತು ಮಾರಾಮಾರಿ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
“ನೂತನ ಸಂಸತ್ತಿನ ಉದ್ಘಾಟನೆಯ ಹಕ್ಕನ್ನು ರಾಷ್ಟ್ರಪತಿಯಿಂದ ಕಿತ್ತುಕೊಳ್ಳಲಾಗಿದೆ. ಸರ್ವಾಧಿಕಾರದ ಬಲದಿಂದ ಮಹಿಳಾ ಆಟಗಾರ್ತಿಯರನ್ನು ಬೀದಿಗಳಲ್ಲಿ ಥಳಿಸಲಾಗಿದೆ ಎಂದು ಖರ್ಗೆ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
“ಬಿಜೆಪಿ-ಆರ್ಎಸ್ಎಸ್ ಆಡಳಿತಗಾರರ ಮೂರು ಸುಳ್ಳುಗಳು, ಪ್ರಜಾಪ್ರಭುತ್ವ, ರಾಷ್ಟ್ರೀಯತೆ ಮತ್ತು ಬೇಟಿ ಬಚಾವೋ ಈಗ ದೇಶದ ಮುಂದೆ ಬಯಲಾಗಿವೆ . ಮೋದಿ ಜೀ ನೆನಪಿರಲಿ, ಪ್ರಜಾಪ್ರಭುತ್ವವು ಕೇವಲ ಕಟ್ಟಡಗಳಲ್ಲ, ಆದರೆ ಸಾರ್ವಜನಿಕರ ಧ್ವನಿಯೊಂದಿಗೆ ಕಾರ್ಯನಿರ್ವಹಿಸುತ್ತದೆ” ಎಂದು ಖರ್ಗೆ ಹೇಳಿದ್ದಾರೆ.
ಜಂತರ್ ಮಂತರ್ನಲ್ಲಿ ಪ್ರತಿಭಟನಾಕಾರರು ಮತ್ತು ದೆಹಲಿ ಪೊಲೀಸರ ನಡುವೆ ಮಾರಾಮಾರಿ ನಡೆದ ನಂತರ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಅವರನ್ನು ಇತರ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…