ಬೆಂಗಳೂರು : ಜನಸಂಕಲ್ಪ ಯಾತ್ರೆ ನಡುವೆ ಇದೇ ವಾರದಲ್ಲಿ ದಿಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ಸಿಕ್ಕರೆ ವರಿಷ್ಠರ ಬಳಿ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.
ತಮ್ಮ ವಿರುದ್ಧ ಆರೋಪ ಕೇಳಿ ಬಂದ ಕಾರಣಕ್ಕೆ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ಈ ಇಬ್ಬರು ನಾಯಕರು ಮತ್ತೆ ಸಂಪುಟ ಸೇರಿದರೆ ತಾವು ದೋಷ ಮುಕ್ತರೆಂಬ ಸಂದೇಶ ರವಾನೆ ಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಎನ್ನ ಲಾಗಿದೆ. ವಿಧಾನ ಸಭೆ ಚುನಾವಣೆಗೆ ಆರು ತಿಂಗಳಷ್ಟೇ ಬಾಕಿಯಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಕ್ಷೀಣಿಸಿದೆ. ಆರೋಪಮುಕ್ತರಾದ ಸಂದೇಶ ರವಾನಿಸುವ ಚಿಂತನೆಯಲ್ಲಿರುವವರು, ಅಲ್ಪಾವಧಿಯಿದ್ದರೂ ಒಮ್ಮೆಯಾದರೂ ಸಚಿವರಾಗಬೇಕೆಂಬ ಹಂಬಲದಲ್ಲಿರುವವರಷ್ಟೇ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ…