BREAKING NEWS

ಒಮ್ಮೆಯಾದರೂ ಸಚಿವರಾಗಬೇಕೆಂಬ ಹಂಬಲದಲ್ಲಿರುವ ಕೆ.ಎಸ್‌. ಈಶ್ವರಪ್ಪ, ರಮೇಶ್‌ ಜಾರಕಿಹೊಳಿ

ಬೆಂಗಳೂರು : ಜನಸಂಕಲ್ಪ ಯಾತ್ರೆ ನಡುವೆ ಇದೇ ವಾರದಲ್ಲಿ ದಿಲ್ಲಿ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ಸಿಕ್ಕರೆ ವರಿಷ್ಠರ ಬಳಿ ಸಂಪುಟ ವಿಸ್ತರಣೆ ವಿಚಾರ ಪ್ರಸ್ತಾಪಿಸುವ ನಿರೀಕ್ಷೆಯಿದ್ದು, ಬಿಜೆಪಿಯಲ್ಲಿ ಚಟುವಟಿಕೆ ಗರಿಗೆದರಿದೆ.

ತಮ್ಮ ವಿರುದ್ಧ ಆರೋಪ ಕೇಳಿ ಬಂದ ಕಾರಣಕ್ಕೆ ರಮೇಶ್ಜಾರಕಿಹೊಳಿ ಹಾಗೂ ಕೆ.ಎಸ್‌. ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ ಇಬ್ಬರು ನಾಯಕರು ಮತ್ತೆ ಸಂಪುಟ ಸೇರಿದರೆ ತಾವು ದೋಷ ಮುಕ್ತರೆಂಬ ಸಂದೇಶ ರವಾನೆ ಯಾಗಲಿದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ ಎನ್ನ ಲಾಗಿದೆ. ವಿಧಾನ ಸಭೆ ಚುನಾವಣೆಗೆ ಆರು ತಿಂಗಳಷ್ಟೇ ಬಾಕಿಯಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಕ್ಷೀಣಿಸಿದೆ. ಆರೋಪಮುಕ್ತರಾದ ಸಂದೇಶ ರವಾನಿಸುವ ಚಿಂತನೆಯಲ್ಲಿರುವವರು, ಅಲ್ಪಾವಧಿಯಿದ್ದರೂ ಒಮ್ಮೆಯಾದರೂ ಸಚಿವರಾಗಬೇಕೆಂಬ ಹಂಬಲದಲ್ಲಿರುವವರಷ್ಟೇ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದಾರೆ.

 

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

14 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

16 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

18 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

19 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

19 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

19 hours ago