BREAKING NEWS

ಮೊದಲ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಕಲ್ಪ: ಸಿದ್ದರಾಮಯ್ಯ

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ  ವಿಷಯದಲ್ಲಿ  ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು  ಪಿ. ಟಿ.ಸಿ.ಎಲ್. ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞ ರೊಂದಿಗೆ ಸಭೆ ನಡೆಸಿ ಚರ್ಚಿಸಿದ ಮುಖ್ಯಮಂತ್ರಿ, ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿ ಟಿ ಸಿ ಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ವಿವರಿಸಿದರು.

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ.  ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

andolanait

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

57 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

3 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

3 hours ago