BREAKING NEWS

ದೇವನಹಳ್ಳಿ| ಟಿಕೆಟ್‌ ಬಯಸಿದ್ದ ವೆಂಕಟಸ್ವಾಮಿ: ಹೃದಯಘಾತದಿಂದ ಸಾವು

ದೇವನಹಳ್ಳಿ: ಹೃದಯಘಾತದಿಂದ ಶನಿವಾರ ಮೃತಪಟ್ಟ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು.‌

ಶುಕ್ರವಾರ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ ಅವರು, ಶನಿವಾರ ತಡರಾತ್ರಿ ಉಸಿರಾಟದಲ್ಲಿ ತೊಂದರೆ ಉಂಟಾಗಿ ಬೆಳಗ್ಗಿನ ಜಾವ 3 ಗಂಟೆಗೆ ನಿಧನರಾಧರು.

ಮೃತರ ಪಾರ್ಥಿವ ಶರೀರ ನೋಡಲು ಅವರ ಸ್ವಗೃಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಎಲ್ಲ ಪಕ್ಷದ ರಾಜಕೀಯ ಮುಖಂಡರು, ಕಾರ್ಯಕರ್ತರು ತಂಡೋಪ ತಂಡವಾಗಿ ಆಗಮಿಸಿ, ಅಂತಿಮ ವಂದನೆ ಸಲ್ಲಿಸಿರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್‌ ಸದಸ್ಯ ಎಸ್.ರವಿ ಸೇರಿದಂತೆ ಗಣ್ಯರು ಭೇಟಿ ನೀಡಿ ಪುಪ್ಪ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಒಂದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ವೆಂಕಟಸ್ವಾಮಿ ಅವರು ಎರಡು ಬಾರಿ ಸೋಲು ಅನುಭವಿಸಿದ್ದರು. ಪ್ರಸ್ತಕ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ದೇವನಹಳ್ಳಿಯ ವಿಜಯಪುರ ಭಾಗದ ಭಟ್ರೇನಹಳ್ಳಿ ಯಿಂದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಪ್ರಾರಂಭಿಸಿದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದರು.

ಟಿಕೆಟ್ ಘೋಷಣೆಗೂ ಮುನ್ನವೇ ವೆಂಕಟಸ್ವಾಮಿ ಅವರಿಗೆ ಮಾರ್ಚ್ 22ರಂದು ಲಘು ಹೃದಯಾಘಾತ ಆಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕ್ಷೇತ್ರಕ್ಕೆ ಮರಳಿದ್ದರು. ಅನಾರೋಗ್ಯವನ್ನು ಲೆಕ್ಕಿಸದೇ ಟಿಕೆಟ್ ಘೋಷಣೆ ಬಳಿಕ ಪಕ್ಷದಲ್ಲಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ ಶಮನಗೊಳಿಸಿದ್ದರು.

ದೆಹಲಿಯಲ್ಲಿ ಲಾಭಿ ನಡೆಸಿ ಟಿಕೆಟ್‌ ಪಡೆದಿದ್ದರು: 2008 ವಿಧಾನ ಸಭಾ ಚುನಾವಣೆಯಲ್ಲಿ ಅಂದಿನ ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯರ ಬೆಂಬಲದೊಂದಿಗೆ ದೆಹಲಿಗೆ ತೆರಳಿ ಲಾಭಿ ನಡೆಸಿ ಟಿಕೆಟ್‌ ತಂದಿದ್ದ ವೆಂಕಟಸ್ವಾಮಿ ಅವರು ಜಯ ಸಾಧಿಸಿದ್ದಾರೆ.

ತಾಲ್ಲೂಕಿನ ಮಿನಿ ವಿಧಾನ ಸೌಧ, ಅಂಬೇಡ್ಕರ್‌ ಭವನ, ಸರ್ಕ್ಯೂಟ್‌ ಹೌಸ್‌, ಆರ್‌ಟಿಓ ಕಚೇರಿಗಳ ನಿರ್ಮಾಣಕ್ಕೆ ಬಿಎಸ್‌ ಯಡಿಯೂರಪ್ಪರ ಸರ್ಕಾರದಲ್ಲಿ ಅನುದಾನ ತಂದು, ಶಂಕುಸ್ಥಾಪನೆ ನೆರವೇರಿಸಿದ್ದರು.

ಕುಟುಂಬಸ್ಥರಿಗೆ ಟಿಕೆಟ್‌ ನೀಡಲು ಒತ್ತಾಯ: ವೆಂಕಟಸ್ವಾಮಿ ಕುಟುಂಬಸ್ಥರಿಗೆ ಟಿಕೆಟ್‌ ನೀಡಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಅವರ ಕುಟುಂದವರಿಗೆ ಟಿಕೆಟ್ ನೀಡಿದರೆ ಅನುಕುಂಪದಲ್ಲಿ ಆಧಾರದಲ್ಲಿ ಗೆಲುವು ಸಾಧಿಸುತ್ತಿದ್ದಾರೆ ಎಂಬ ಚರ್ಚೆ ಅವರ ಪಾರ್ಥಿವ ಶರೀರದ ಮುಂದೆ ನಡೆದವು. ಭೋವಿ ಸಮುದಾಯದ ಮುಖಂಡರು ಭಾನುವಾರ ಈ ಕುರಿತು ಹೈಕಮಾಂಡ್‌ಗೆ ಒತ್ತಡ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.

andolanait

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

7 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

9 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

10 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

10 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

10 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

11 hours ago