BREAKING NEWS

ದೇವನಹಳ್ಳಿ| ಟಿಕೆಟ್‌ ಬಯಸಿದ್ದ ವೆಂಕಟಸ್ವಾಮಿ: ಹೃದಯಘಾತದಿಂದ ಸಾವು

ದೇವನಹಳ್ಳಿ: ಹೃದಯಘಾತದಿಂದ ಶನಿವಾರ ಮೃತಪಟ್ಟ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು.‌

ಶುಕ್ರವಾರ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ ಅವರು, ಶನಿವಾರ ತಡರಾತ್ರಿ ಉಸಿರಾಟದಲ್ಲಿ ತೊಂದರೆ ಉಂಟಾಗಿ ಬೆಳಗ್ಗಿನ ಜಾವ 3 ಗಂಟೆಗೆ ನಿಧನರಾಧರು.

ಮೃತರ ಪಾರ್ಥಿವ ಶರೀರ ನೋಡಲು ಅವರ ಸ್ವಗೃಹಕ್ಕೆ ಸಾವಿರಾರು ಸಂಖ್ಯೆಯಲ್ಲಿ ಎಲ್ಲ ಪಕ್ಷದ ರಾಜಕೀಯ ಮುಖಂಡರು, ಕಾರ್ಯಕರ್ತರು ತಂಡೋಪ ತಂಡವಾಗಿ ಆಗಮಿಸಿ, ಅಂತಿಮ ವಂದನೆ ಸಲ್ಲಿಸಿರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್‌ ಸದಸ್ಯ ಎಸ್.ರವಿ ಸೇರಿದಂತೆ ಗಣ್ಯರು ಭೇಟಿ ನೀಡಿ ಪುಪ್ಪ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಒಂದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದ ವೆಂಕಟಸ್ವಾಮಿ ಅವರು ಎರಡು ಬಾರಿ ಸೋಲು ಅನುಭವಿಸಿದ್ದರು. ಪ್ರಸ್ತಕ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ದೇವನಹಳ್ಳಿಯ ವಿಜಯಪುರ ಭಾಗದ ಭಟ್ರೇನಹಳ್ಳಿ ಯಿಂದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಪ್ರಾರಂಭಿಸಿದರು. ಆದರೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೆ ಈಡಾಗಿದ್ದರು.

ಟಿಕೆಟ್ ಘೋಷಣೆಗೂ ಮುನ್ನವೇ ವೆಂಕಟಸ್ವಾಮಿ ಅವರಿಗೆ ಮಾರ್ಚ್ 22ರಂದು ಲಘು ಹೃದಯಾಘಾತ ಆಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಕ್ಷೇತ್ರಕ್ಕೆ ಮರಳಿದ್ದರು. ಅನಾರೋಗ್ಯವನ್ನು ಲೆಕ್ಕಿಸದೇ ಟಿಕೆಟ್ ಘೋಷಣೆ ಬಳಿಕ ಪಕ್ಷದಲ್ಲಿ ಭುಗಿಲೆದ್ದಿದ್ದ ಭಿನ್ನಾಭಿಪ್ರಾಯ ಶಮನಗೊಳಿಸಿದ್ದರು.

ದೆಹಲಿಯಲ್ಲಿ ಲಾಭಿ ನಡೆಸಿ ಟಿಕೆಟ್‌ ಪಡೆದಿದ್ದರು: 2008 ವಿಧಾನ ಸಭಾ ಚುನಾವಣೆಯಲ್ಲಿ ಅಂದಿನ ವಿಧಾನ ಪರಿಷತ್‌ ಸದಸ್ಯ ಕೆ.ಸಿ.ಕೊಂಡಯ್ಯರ ಬೆಂಬಲದೊಂದಿಗೆ ದೆಹಲಿಗೆ ತೆರಳಿ ಲಾಭಿ ನಡೆಸಿ ಟಿಕೆಟ್‌ ತಂದಿದ್ದ ವೆಂಕಟಸ್ವಾಮಿ ಅವರು ಜಯ ಸಾಧಿಸಿದ್ದಾರೆ.

ತಾಲ್ಲೂಕಿನ ಮಿನಿ ವಿಧಾನ ಸೌಧ, ಅಂಬೇಡ್ಕರ್‌ ಭವನ, ಸರ್ಕ್ಯೂಟ್‌ ಹೌಸ್‌, ಆರ್‌ಟಿಓ ಕಚೇರಿಗಳ ನಿರ್ಮಾಣಕ್ಕೆ ಬಿಎಸ್‌ ಯಡಿಯೂರಪ್ಪರ ಸರ್ಕಾರದಲ್ಲಿ ಅನುದಾನ ತಂದು, ಶಂಕುಸ್ಥಾಪನೆ ನೆರವೇರಿಸಿದ್ದರು.

ಕುಟುಂಬಸ್ಥರಿಗೆ ಟಿಕೆಟ್‌ ನೀಡಲು ಒತ್ತಾಯ: ವೆಂಕಟಸ್ವಾಮಿ ಕುಟುಂಬಸ್ಥರಿಗೆ ಟಿಕೆಟ್‌ ನೀಡಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಅವರ ಕುಟುಂದವರಿಗೆ ಟಿಕೆಟ್ ನೀಡಿದರೆ ಅನುಕುಂಪದಲ್ಲಿ ಆಧಾರದಲ್ಲಿ ಗೆಲುವು ಸಾಧಿಸುತ್ತಿದ್ದಾರೆ ಎಂಬ ಚರ್ಚೆ ಅವರ ಪಾರ್ಥಿವ ಶರೀರದ ಮುಂದೆ ನಡೆದವು. ಭೋವಿ ಸಮುದಾಯದ ಮುಖಂಡರು ಭಾನುವಾರ ಈ ಕುರಿತು ಹೈಕಮಾಂಡ್‌ಗೆ ಒತ್ತಡ ತರಲು ಮುಂದಾಗಿದ್ದಾರೆ ಎನ್ನಲಾಗಿದೆ.

andolanait

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

7 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

8 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

8 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

8 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

8 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

8 hours ago