BREAKING NEWS

ಅಂಧಕಾಸುರ ಸಂಹಾರ: ನಂಜನಗೂಡಿನಲ್ಲಿ ಭಕ್ತರು ಹಾಗೂ ಪ್ರಗತಿಪರ ಹೋರಾಟಗಾರರ ನಡುವೆ ವಾಗ್ವಾದ

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಅಂಧಕಾಸುರ ಸಂಹಾರವನ್ನು ಆಯೋಜಿಸಲಾಗಿತ್ತು. ದೇವಾಲಯದ ಬಳಿ ಇರುವ ರಾಕ್ಷಸ ಮಂಟಪದ ಮುಂದೆ ಅಂಧಕಾಸುರನ ಚಿತ್ರವನ್ನು ರಂಗೋಲಿ ಮೂಲಕ ಬಿಡಿಸಿ ದೇವರ ಮೂರ್ತಿಯನ್ನು ಆ ಮಂಟಪದ ಬಳಿ ತಂದ ಬಳಿಕ ಆ ರಂಗೋಲಿಯನ್ನು ಕಾಲಿನಿಂದ ಅಳಿಸಿ ಹಾಕುವ ಮೂಲಕ ಅಂಧಕಾಸುರನ ಸಂಹಾರವನ್ನು ಆಚರಿಸಲಾಗುತ್ತಿತ್ತು.

ಆದರೆ ಇಂದು ( ಡಿಸೆಂಬರ್‌ 26 ) ನಡೆಯಬೇಕಿದ್ದ ಈ ಆಚರಣೆಗೆ ಪ್ರಗತಿಪರ ಚಿಂತಕರು ವಿರೋಧ ವ್ಯಕ್ತಪಡಿಸಿದ್ದು ಇಂತಹ ಆಚರಣೆ ನಡೆಯಬಾರದು ಎಂದು ತಡೆಯಲು ಮುಂದಾಗಿದ್ದಾರೆ. ಈ ವೇಳೆ ನಂಜುಂಡೇಶ್ವರ ಭಕ್ತರು ಹಾಗೂ ಪ್ರಗತಿಪರರ ಚಿಂತಕರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಆಚರಣೆ ಶತಮಾನಗಳಿಂದ ನಡೆದುಕೊಂಡು ಬಂದಿದ್ದು ಯಾವುದೇ ಕಾರಣಕ್ಕೂ ಇದನ್ನು ನಿಲ್ಲಿಸುವುದಿಲ್ಲ ಎಂದು ಪ್ರಗತಿಪರ ಚಿಂತಕರ ವಿರುದ್ಧ ಕಿಡಿಕಾರಿದ್ದಾರೆ.

andolana

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

16 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

19 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

21 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

21 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

21 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

21 hours ago