ಮೈಸೂರು : ಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ.
ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮಾರ್ಚ್ 11ರಂದು ಆರ್. ಧ್ರುವನಾರಾಯಣ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಧ್ರುವನಾರಾಯಣ್ ನಿಧನದ ನಂತರ ವೀಣಾ ಅವರ ಕಾಯಿಲೆ ಮತ್ತಷ್ಟು ಉಲ್ಬಣಿಸಿತ್ತು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವೀಣಾ ಮೃತಪಟ್ಟಿದ್ದಾರೆ.
ಧ್ರುವನಾರಾಯಣ್ಗೆ ದರ್ಶನ್ ಮತ್ತು ಧೀರನ್ ಇಬ್ಬರು ಪುತ್ರರಿದ್ದಾರೆ. ಕೇವಲ 28 ದಿನಗಳ ಅಂತರದಲ್ಲೇ ಪತಿ, ಪತ್ನಿ ನಿಧನದಿಂದ ಧ್ರುವನಾರಾಯಣ್ ಮಕ್ಕಳು ಕಂಗಾಲಾಗಿದ್ದಾರೆ
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…