BREAKING NEWS

ಮುಸ್ಲಿಮರು ಎಂದಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? : ಬೆಲ್ಲದ್ ಪ್ರಶ್ನೆ‌

ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು.

ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಮರು ಯಾವತ್ತಿದ್ದರೂ ನಮಗೆ ಮತ ಹಾಕುವುದೇ ಇಲ್ಲ. ಮುಸ್ಲಿಂನ ಕೆಲವು ಒಳಪಂಗಡಗಳು ಪ್ರವರ್ಗ-1, 2ಎ, 2ಬಿ ಅಡಿ ಮೀಸಲಾತಿ ಪಡೆಯುತ್ತಿದ್ದವು. ಒಟ್ಟಾರೆಯಾಗಿ ಅತಿ ಹೆಚ್ಚು ಮೀಸಲಾತಿಯನ್ನು ಮುಸ್ಲಿಮರು ಧರ್ಮದವರು ಪಡೆಯುತ್ತಿದ್ದರು. ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಅದಕ್ಕಾಗಿ ಅದನ್ನು ತೆಗೆದುಹಾಕಲಾಯಿತು. ಆದರೆ, ಇದನ್ನು ತೆಗೆದಿದ್ದಕ್ಕೆ ನಾವು ಸೋತಿದ್ದೇವೆ ಎಂಬ ವಿಶ್ಲೇಷಣೆ ಸರಿಯಲ್ಲ ಎಂದರು.

ಒಳಮೀಸಲಾತಿ ವರ್ಗೀಕರಣ ಹಾಗೂ ಒಕ್ಕಲಿಗ, ವೀರಶೈವ ಲಿಂಗಾಯತದವರಿಗೆ ಮೀಸಲಾತಿ ನೀಡುವ ತೀರ್ಮಾನ 6 ತಿಂಗಳು ಮೊದಲು ಮಾಡಬೇಕಾಗಿತ್ತು. ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಲುಪಿಸಲು ಸಮಯಾವಕಾಶ ದೊರೆಯುತ್ತಿತ್ತು. ಕೊನೆ ಗಳಿಗೆಯಲ್ಲಿ ಮೀಸಲಾತಿ ತೀರ್ಮಾನ ಆಗಿದ್ದರಿಂದ ಜನರಿಗೆ ತಿಳಿಸಲು ಸಾಧ್ಯವಾಗಲಿಲ್ಲ ಎಂದು ಬೆಲ್ಲದ್ ವಿಶ್ಲೇಷಿಸಿದರು.

ಪರಿಶಿಷ್ಟಪಂಗಡ (ಎಸ್‌ಟಿ) ಸಮುದಾಯಕ್ಕೆ ಇದ್ದ ಶೇ. 3ರ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸುವಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಇದರಿಂದ ಪಕ್ಷಕ್ಕೇನೂ ಲಾಭವಾಗಲಿಲ್ಲ. ಈ ಜನಾಂಗದವರಿಗೆ ಮೀಸಲಾಗಿದ್ದ 16 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೂ ಸ್ಥಾನದಲ್ಲಿ ಬಿಜೆಪಿ ಗೆಲ್ಲಲಿಲ್ಲ. ಇದರ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.

lokesh

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

39 mins ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

3 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

3 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

3 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

3 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

5 hours ago