BREAKING NEWS

ಮುಸ್ಲಿಮರು ಎಂದಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? : ಬೆಲ್ಲದ್ ಪ್ರಶ್ನೆ‌

ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು.

ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಮರು ಯಾವತ್ತಿದ್ದರೂ ನಮಗೆ ಮತ ಹಾಕುವುದೇ ಇಲ್ಲ. ಮುಸ್ಲಿಂನ ಕೆಲವು ಒಳಪಂಗಡಗಳು ಪ್ರವರ್ಗ-1, 2ಎ, 2ಬಿ ಅಡಿ ಮೀಸಲಾತಿ ಪಡೆಯುತ್ತಿದ್ದವು. ಒಟ್ಟಾರೆಯಾಗಿ ಅತಿ ಹೆಚ್ಚು ಮೀಸಲಾತಿಯನ್ನು ಮುಸ್ಲಿಮರು ಧರ್ಮದವರು ಪಡೆಯುತ್ತಿದ್ದರು. ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಅದಕ್ಕಾಗಿ ಅದನ್ನು ತೆಗೆದುಹಾಕಲಾಯಿತು. ಆದರೆ, ಇದನ್ನು ತೆಗೆದಿದ್ದಕ್ಕೆ ನಾವು ಸೋತಿದ್ದೇವೆ ಎಂಬ ವಿಶ್ಲೇಷಣೆ ಸರಿಯಲ್ಲ ಎಂದರು.

ಒಳಮೀಸಲಾತಿ ವರ್ಗೀಕರಣ ಹಾಗೂ ಒಕ್ಕಲಿಗ, ವೀರಶೈವ ಲಿಂಗಾಯತದವರಿಗೆ ಮೀಸಲಾತಿ ನೀಡುವ ತೀರ್ಮಾನ 6 ತಿಂಗಳು ಮೊದಲು ಮಾಡಬೇಕಾಗಿತ್ತು. ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಲುಪಿಸಲು ಸಮಯಾವಕಾಶ ದೊರೆಯುತ್ತಿತ್ತು. ಕೊನೆ ಗಳಿಗೆಯಲ್ಲಿ ಮೀಸಲಾತಿ ತೀರ್ಮಾನ ಆಗಿದ್ದರಿಂದ ಜನರಿಗೆ ತಿಳಿಸಲು ಸಾಧ್ಯವಾಗಲಿಲ್ಲ ಎಂದು ಬೆಲ್ಲದ್ ವಿಶ್ಲೇಷಿಸಿದರು.

ಪರಿಶಿಷ್ಟಪಂಗಡ (ಎಸ್‌ಟಿ) ಸಮುದಾಯಕ್ಕೆ ಇದ್ದ ಶೇ. 3ರ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸುವಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಇದರಿಂದ ಪಕ್ಷಕ್ಕೇನೂ ಲಾಭವಾಗಲಿಲ್ಲ. ಈ ಜನಾಂಗದವರಿಗೆ ಮೀಸಲಾಗಿದ್ದ 16 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೂ ಸ್ಥಾನದಲ್ಲಿ ಬಿಜೆಪಿ ಗೆಲ್ಲಲಿಲ್ಲ. ಇದರ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

6 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago