ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು.
ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಮರು ಯಾವತ್ತಿದ್ದರೂ ನಮಗೆ ಮತ ಹಾಕುವುದೇ ಇಲ್ಲ. ಮುಸ್ಲಿಂನ ಕೆಲವು ಒಳಪಂಗಡಗಳು ಪ್ರವರ್ಗ-1, 2ಎ, 2ಬಿ ಅಡಿ ಮೀಸಲಾತಿ ಪಡೆಯುತ್ತಿದ್ದವು. ಒಟ್ಟಾರೆಯಾಗಿ ಅತಿ ಹೆಚ್ಚು ಮೀಸಲಾತಿಯನ್ನು ಮುಸ್ಲಿಮರು ಧರ್ಮದವರು ಪಡೆಯುತ್ತಿದ್ದರು. ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಅದಕ್ಕಾಗಿ ಅದನ್ನು ತೆಗೆದುಹಾಕಲಾಯಿತು. ಆದರೆ, ಇದನ್ನು ತೆಗೆದಿದ್ದಕ್ಕೆ ನಾವು ಸೋತಿದ್ದೇವೆ ಎಂಬ ವಿಶ್ಲೇಷಣೆ ಸರಿಯಲ್ಲ ಎಂದರು.
ಒಳಮೀಸಲಾತಿ ವರ್ಗೀಕರಣ ಹಾಗೂ ಒಕ್ಕಲಿಗ, ವೀರಶೈವ ಲಿಂಗಾಯತದವರಿಗೆ ಮೀಸಲಾತಿ ನೀಡುವ ತೀರ್ಮಾನ 6 ತಿಂಗಳು ಮೊದಲು ಮಾಡಬೇಕಾಗಿತ್ತು. ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಲುಪಿಸಲು ಸಮಯಾವಕಾಶ ದೊರೆಯುತ್ತಿತ್ತು. ಕೊನೆ ಗಳಿಗೆಯಲ್ಲಿ ಮೀಸಲಾತಿ ತೀರ್ಮಾನ ಆಗಿದ್ದರಿಂದ ಜನರಿಗೆ ತಿಳಿಸಲು ಸಾಧ್ಯವಾಗಲಿಲ್ಲ ಎಂದು ಬೆಲ್ಲದ್ ವಿಶ್ಲೇಷಿಸಿದರು.
ಪರಿಶಿಷ್ಟಪಂಗಡ (ಎಸ್ಟಿ) ಸಮುದಾಯಕ್ಕೆ ಇದ್ದ ಶೇ. 3ರ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸುವಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಇದರಿಂದ ಪಕ್ಷಕ್ಕೇನೂ ಲಾಭವಾಗಲಿಲ್ಲ. ಈ ಜನಾಂಗದವರಿಗೆ ಮೀಸಲಾಗಿದ್ದ 16 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೂ ಸ್ಥಾನದಲ್ಲಿ ಬಿಜೆಪಿ ಗೆಲ್ಲಲಿಲ್ಲ. ಇದರ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…