BREAKING NEWS

ಮುಸ್ಲಿಮರು ಎಂದಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? : ಬೆಲ್ಲದ್ ಪ್ರಶ್ನೆ‌

ಹುಬ್ಬಳ್ಳಿ : ಮುಸ್ಲಿಮರ ಮೀಸಲಾತಿ ತೆಗೆದುಹಾಕಿದ್ದರಿಂದ ಅವರೆಲ್ಲರೂ ಒಟ್ಟಾಗಿ ಕಾಂಗ್ರೆಸ್‌ಗೆ ಮತ ಹಾಕಿದರು. ಹೀಗಾಗಿ, ಬಿಜೆಪಿ ಸೋತಿತು ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಮುಸ್ಲಿಮರು ಯಾವತ್ತಾದರೂ ಬಿಜೆಪಿಗೆ ಮತ ಹಾಕಿದ್ದಾರೆಯೇ? ಎಂದು ಶಾಸಕ ಅರವಿಂದ್ ಬೆಲ್ಲದ್ ಪ್ರಶ್ನಿಸಿದರು.

ಇಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಸ್ಲಿಮರು ಯಾವತ್ತಿದ್ದರೂ ನಮಗೆ ಮತ ಹಾಕುವುದೇ ಇಲ್ಲ. ಮುಸ್ಲಿಂನ ಕೆಲವು ಒಳಪಂಗಡಗಳು ಪ್ರವರ್ಗ-1, 2ಎ, 2ಬಿ ಅಡಿ ಮೀಸಲಾತಿ ಪಡೆಯುತ್ತಿದ್ದವು. ಒಟ್ಟಾರೆಯಾಗಿ ಅತಿ ಹೆಚ್ಚು ಮೀಸಲಾತಿಯನ್ನು ಮುಸ್ಲಿಮರು ಧರ್ಮದವರು ಪಡೆಯುತ್ತಿದ್ದರು. ನಮ್ಮ ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಅದಕ್ಕಾಗಿ ಅದನ್ನು ತೆಗೆದುಹಾಕಲಾಯಿತು. ಆದರೆ, ಇದನ್ನು ತೆಗೆದಿದ್ದಕ್ಕೆ ನಾವು ಸೋತಿದ್ದೇವೆ ಎಂಬ ವಿಶ್ಲೇಷಣೆ ಸರಿಯಲ್ಲ ಎಂದರು.

ಒಳಮೀಸಲಾತಿ ವರ್ಗೀಕರಣ ಹಾಗೂ ಒಕ್ಕಲಿಗ, ವೀರಶೈವ ಲಿಂಗಾಯತದವರಿಗೆ ಮೀಸಲಾತಿ ನೀಡುವ ತೀರ್ಮಾನ 6 ತಿಂಗಳು ಮೊದಲು ಮಾಡಬೇಕಾಗಿತ್ತು. ಅದರ ಪ್ರಯೋಜನಗಳ ಬಗ್ಗೆ ಜನರಿಗೆ ತಲುಪಿಸಲು ಸಮಯಾವಕಾಶ ದೊರೆಯುತ್ತಿತ್ತು. ಕೊನೆ ಗಳಿಗೆಯಲ್ಲಿ ಮೀಸಲಾತಿ ತೀರ್ಮಾನ ಆಗಿದ್ದರಿಂದ ಜನರಿಗೆ ತಿಳಿಸಲು ಸಾಧ್ಯವಾಗಲಿಲ್ಲ ಎಂದು ಬೆಲ್ಲದ್ ವಿಶ್ಲೇಷಿಸಿದರು.

ಪರಿಶಿಷ್ಟಪಂಗಡ (ಎಸ್‌ಟಿ) ಸಮುದಾಯಕ್ಕೆ ಇದ್ದ ಶೇ. 3ರ ಮೀಸಲಾತಿಯನ್ನು ಶೇ. 7ಕ್ಕೆ ಹೆಚ್ಚಿಸುವಂತಹ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಯಿತು. ಆದರೆ, ಇದರಿಂದ ಪಕ್ಷಕ್ಕೇನೂ ಲಾಭವಾಗಲಿಲ್ಲ. ಈ ಜನಾಂಗದವರಿಗೆ ಮೀಸಲಾಗಿದ್ದ 16 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೂ ಸ್ಥಾನದಲ್ಲಿ ಬಿಜೆಪಿ ಗೆಲ್ಲಲಿಲ್ಲ. ಇದರ ಬಗ್ಗೆ ಚರ್ಚಿಸಬೇಕಾಗಿದೆ ಎಂದರು.

lokesh

Recent Posts

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

3 mins ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

20 mins ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

31 mins ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

37 mins ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

41 mins ago

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

49 mins ago