BREAKING NEWS

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ ಬರೆದಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ.

ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದರೂ ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವುದು ಸತ್ಯಕ್ಕೆ ದೂರವಾದುದು ಹಾಗೂ ಕಪೋಲ ಕಲ್ಪಿತ. ತಮ್ಮ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ತಂದು ಹಾಕಲು, ಒಡಕು ಮೂಡಿಸಲು ಈ ಸುಳ್ಳು ಸುದ್ದಿಯನ್ನು ಸೃಷ್ಠಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಲಿರುವ ಜಾತಿ ಗಣತಿ ವರದಿ ಅಂಗೀಕಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿತ್ತು. ಈ ಪತ್ರದಲ್ಲಿ ಅವರು ಜಾತಿ ಗಣತಿ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಆದರೆ ಇದೀಗ ಅವರು ಸ್ವತಃ ಈ ವಿಚಾರವನ್ನು ನಿರಾಕರಣೆ ಮಾಡಿದ್ದಾರೆ. ಜಾತಿ ಗಣತಿ ವರದಿ ಅಂಗೀಕಾರಕ್ಕೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂಬ ವಿಚಾರ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

2015 ರಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ನವೆಂಬರ್ ಅಂತ್ಯದೊಳಗಾಗಿ ಸರ್ಕಾರಕ್ಕೆ ಸಲ್ಲಿಸಲು ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಆಯೋಗದಿಂದ ವರದಿಯನ್ನು ಸ್ಪೀಕಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿರುವ ಹಿನ್ನೆಲೆಯಲ್ಲಿ ಅಗತ್ಯ ಕೆಲಸ ಕಾರ್ಯಗಳನ್ನು ಆಯೋಗ ತ್ವರಿತಗೊಳಿಸಿದೆ.

ಕೆ ಜಯಪ್ರಕಾಶ್ ಹೆಗ್ಡೆ ಅವರ ಮೂರು ವರ್ಷಗಳ ಅಧಿಕಾರ ಅವಧಿ ನವೆಂಬರ್ 25 ಕ್ಕೆ ಪೂರ್ಣಗೊಳ್ಳಲಿದೆ. ಈ ಅವಧಿಯ ಒಳಗಾಗಿ ಅವರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ

andolanait

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

2 hours ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

3 hours ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

3 hours ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

3 hours ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

3 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

3 hours ago