BREAKING NEWS

ಜಾತಿ ಗಣತಿ ವರದಿ ಕುರಿತು ಸಿಎಂಗೆ ಪತ್ರ ಬರೆದಿಲ್ಲ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ.

ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ ವಿಚಾರವಾಗಿ ಅವರ ಜತೆ ಚರ್ಚೆಯನ್ನೂ ನಡೆಸಿಲ್ಲ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆದರೂ ಈ ಬಗ್ಗೆ ಕೆಲವು ಮಾಧ್ಯಮಗಳಲ್ಲಿ ವರದಿ ಆಗಿರುವುದು ಸತ್ಯಕ್ಕೆ ದೂರವಾದುದು ಹಾಗೂ ಕಪೋಲ ಕಲ್ಪಿತ. ತಮ್ಮ ಮತ್ತು ಸಿಎಂ ಸಿದ್ದರಾಮಯ್ಯ ಅವರ ನಡುವೆ ತಂದು ಹಾಕಲು, ಒಡಕು ಮೂಡಿಸಲು ಈ ಸುಳ್ಳು ಸುದ್ದಿಯನ್ನು ಸೃಷ್ಠಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಲ್ಲಿಸಲಿರುವ ಜಾತಿ ಗಣತಿ ವರದಿ ಅಂಗೀಕಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿತ್ತು. ಈ ಪತ್ರದಲ್ಲಿ ಅವರು ಜಾತಿ ಗಣತಿ ಅಂಗೀಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ಆದರೆ ಇದೀಗ ಅವರು ಸ್ವತಃ ಈ ವಿಚಾರವನ್ನು ನಿರಾಕರಣೆ ಮಾಡಿದ್ದಾರೆ. ಜಾತಿ ಗಣತಿ ವರದಿ ಅಂಗೀಕಾರಕ್ಕೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೇನೆ ಎಂಬ ವಿಚಾರ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

2015 ರಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ನವೆಂಬರ್ ಅಂತ್ಯದೊಳಗಾಗಿ ಸರ್ಕಾರಕ್ಕೆ ಸಲ್ಲಿಸಲು ಕೆ. ಜಯಪ್ರಕಾಶ್ ಹೆಗ್ಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ಮುಂದಾಗಿದೆ. ಆಯೋಗದಿಂದ ವರದಿಯನ್ನು ಸ್ಪೀಕಾರ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿರುವ ಹಿನ್ನೆಲೆಯಲ್ಲಿ ಅಗತ್ಯ ಕೆಲಸ ಕಾರ್ಯಗಳನ್ನು ಆಯೋಗ ತ್ವರಿತಗೊಳಿಸಿದೆ.

ಕೆ ಜಯಪ್ರಕಾಶ್ ಹೆಗ್ಡೆ ಅವರ ಮೂರು ವರ್ಷಗಳ ಅಧಿಕಾರ ಅವಧಿ ನವೆಂಬರ್ 25 ಕ್ಕೆ ಪೂರ್ಣಗೊಳ್ಳಲಿದೆ. ಈ ಅವಧಿಯ ಒಳಗಾಗಿ ಅವರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದ್ದಾರೆ

andolanait

Recent Posts

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

1 min ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

34 mins ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

5 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

5 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

5 hours ago