BREAKING NEWS

ಕಾಂಗ್ರೆಸ್ ನಲ್ಲಿ ಸಮರ್ಥ ನಾಯಕರಿಲ್ಲದ್ದಕ್ಕೆ ಸಿದ್ದರಾಮಯ್ಯರನ್ನು ಆಮದು ಮಾಡಿಕೊಂಡಿದ್ದೀರಾ ? : ಲೆಹರ್ ಸಿಂಗ್

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರು ಇಲ್ಲದ ಕಾರಣಕ್ಕೆ ಜೆಡಿಎಸ್‍ನಿಂದ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡು ಮುಖ್ಯಮಂತ್ರಿ ಮಾಡಲಾಯಿತೇ? ಎಂದು ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್ ಅವರು ಸಚಿವ ಎಂ.ಬಿ.ಪಾಟೀಲ್‍ಗೆ ಪ್ರಶ್ನಿಸಿದ್ದಾರೆ.

ವಿಪಕ್ಷ ನಾಯಕನಾಗಲು ಬಿಜೆಪಿಯಲ್ಲಿ ಸಮರ್ಥರಿಲ್ಲವೇ? ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಲೆಹರ್ ಸಿಂಗ್, ಹಾಗಾದರೆ ಕಾಂಗ್ರೆಸ್‍ನಲ್ಲೂ ಸಮರ್ಥ ನಾಯಕರಿಲ್ಲದೆ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡಿದ್ದೀರ ಎಂದು ಮರುಪ್ರಶ್ನೆ ಮಾಡಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಲ್ಲಿ ವಿಪಕ್ಷ ನಾಯಕರಾಗಲು ಸಮರ್ಥರಿಲ್ಲವೇ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಂದಾಳತ್ವ ವಹಿಸಲು ಬಿಜೆಪಿಯವರು ಏಕೆ ಕೇಳುತ್ತಿದ್ದಾರೆ ಎಂಬ ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಮೊದಲು ಕಾಂಗ್ರೆಸ್‍ನಲ್ಲಿ ಮುಖ್ಯಮಂತ್ರಿಯಾಗಲು ಸಮರ್ಥ ನಾಯಕರಿರಲಿಲ್ಲವೇ ಎಂಬುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.
ಜೆಡಿಎಸ್ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಆಮದು ಮಾಡಿಕೊಂಡಿದ್ದು ಏಕೆ? ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಅಥವಾ ಎಂ.ಬಿ.ಪಾಟೀಲ್ ಅವರನ್ನೇ ಏಕೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago