ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಮರ್ಥ ನಾಯಕರು ಇಲ್ಲದ ಕಾರಣಕ್ಕೆ ಜೆಡಿಎಸ್ನಿಂದ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡು ಮುಖ್ಯಮಂತ್ರಿ ಮಾಡಲಾಯಿತೇ? ಎಂದು ರಾಜ್ಯ ಸಭಾ ಸದಸ್ಯ ಲೆಹರ್ ಸಿಂಗ್ ಅವರು ಸಚಿವ ಎಂ.ಬಿ.ಪಾಟೀಲ್ಗೆ ಪ್ರಶ್ನಿಸಿದ್ದಾರೆ.
ವಿಪಕ್ಷ ನಾಯಕನಾಗಲು ಬಿಜೆಪಿಯಲ್ಲಿ ಸಮರ್ಥರಿಲ್ಲವೇ? ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಲೆಹರ್ ಸಿಂಗ್, ಹಾಗಾದರೆ ಕಾಂಗ್ರೆಸ್ನಲ್ಲೂ ಸಮರ್ಥ ನಾಯಕರಿಲ್ಲದೆ ಸಿದ್ದರಾಮಯ್ಯ ಅವರನ್ನು ಆಮದು ಮಾಡಿಕೊಂಡಿದ್ದೀರ ಎಂದು ಮರುಪ್ರಶ್ನೆ ಮಾಡಿದ್ದಾರೆ.
ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯಲ್ಲಿ ವಿಪಕ್ಷ ನಾಯಕರಾಗಲು ಸಮರ್ಥರಿಲ್ಲವೇ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಂದಾಳತ್ವ ವಹಿಸಲು ಬಿಜೆಪಿಯವರು ಏಕೆ ಕೇಳುತ್ತಿದ್ದಾರೆ ಎಂಬ ಕರ್ನಾಟಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಮೊದಲು ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಯಾಗಲು ಸಮರ್ಥ ನಾಯಕರಿರಲಿಲ್ಲವೇ ಎಂಬುದಕ್ಕೆ ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.
ಜೆಡಿಎಸ್ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಆಮದು ಮಾಡಿಕೊಂಡಿದ್ದು ಏಕೆ? ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲ್ ಅಥವಾ ಎಂ.ಬಿ.ಪಾಟೀಲ್ ಅವರನ್ನೇ ಏಕೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದ್ದಾರೆ.
ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…
ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…
ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…
ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…