ಧಾರವಾಡ: ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಇಂದು (ಏ.೮) ಘೋಷಣೆ ಮಾಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನಿಂದ ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣೆಗೆ ಕ್ಷೇತ್ರದಿಂದ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದರ ನಡುವೆ ಸ್ವಾಮೀಜಿಗಳು ತಾವು ಸ್ಪರ್ಧಿಯಾಗಿ ಕಣಕ್ಕಿಳಿದಿರುವ ಬಗ್ಗೆ ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿಗೆ ಪ್ರತಿಸ್ಪರ್ಧಿಯಾಗಿ ವಿನೋದ ಅಸೂಟಿ ಹೆಸರು ಘೋಷಿಸಿದ ನಂತರವೂ ಕ್ಷೇತ್ರದಲ್ಲಿ ಅಷ್ಟೊಂದು ಬೆಳವಣಿಗೆಗಳು ಕಂಡು ಬರಲಿಲ್ಲ. ಆದರೆ ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿಯ ಆಗಮನದವರೆಗು ಶಾಂತವಾಗಿಯೇ ಇದ್ದ ಕ್ಷೇತ್ರ, ಸ್ವಾಮೀಜಿಯವರ ಆಗಮನ ನಂತರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಬಿಜೆಪಿಯಿಂದ ಜೋಶಿಗೆ ಟಿಕೆಟ್ ನೀಡಬೇಡಿ ಎಂದು ದಿಂಗಾಲೇಶ್ವರ ಸ್ವಾಮಿಗಳು ಎನ್ಡಿಎ ತಿಳಿಸಿದ್ದರು. ಇದ್ಯಾವುದನ್ನು ಕ್ಯಾರೆ ಎನ್ನದ ಎನ್ಡಿಎ ವಿರುದ್ಧ ಅಸಮಧಾನಗೊಂಡ ಸ್ವಾಮಿಜಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…