ಧಾರವಾಡ: ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಇಂದು (ಏ.೮) ಘೋಷಣೆ ಮಾಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನಿಂದ ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣೆಗೆ ಕ್ಷೇತ್ರದಿಂದ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದರ ನಡುವೆ ಸ್ವಾಮೀಜಿಗಳು ತಾವು ಸ್ಪರ್ಧಿಯಾಗಿ ಕಣಕ್ಕಿಳಿದಿರುವ ಬಗ್ಗೆ ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿಗೆ ಪ್ರತಿಸ್ಪರ್ಧಿಯಾಗಿ ವಿನೋದ ಅಸೂಟಿ ಹೆಸರು ಘೋಷಿಸಿದ ನಂತರವೂ ಕ್ಷೇತ್ರದಲ್ಲಿ ಅಷ್ಟೊಂದು ಬೆಳವಣಿಗೆಗಳು ಕಂಡು ಬರಲಿಲ್ಲ. ಆದರೆ ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿಯ ಆಗಮನದವರೆಗು ಶಾಂತವಾಗಿಯೇ ಇದ್ದ ಕ್ಷೇತ್ರ, ಸ್ವಾಮೀಜಿಯವರ ಆಗಮನ ನಂತರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಬಿಜೆಪಿಯಿಂದ ಜೋಶಿಗೆ ಟಿಕೆಟ್ ನೀಡಬೇಡಿ ಎಂದು ದಿಂಗಾಲೇಶ್ವರ ಸ್ವಾಮಿಗಳು ಎನ್ಡಿಎ ತಿಳಿಸಿದ್ದರು. ಇದ್ಯಾವುದನ್ನು ಕ್ಯಾರೆ ಎನ್ನದ ಎನ್ಡಿಎ ವಿರುದ್ಧ ಅಸಮಧಾನಗೊಂಡ ಸ್ವಾಮಿಜಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…