ಧಾರವಾಡ: ಶಿರಹಟ್ಟಿ ಫಕ್ಕೀರೇಶ್ವರ ಮಠದ ಪೀಠಾಧಿಪತಿ ಜಗದ್ಗುರು ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಇಂದು (ಏ.೮) ಘೋಷಣೆ ಮಾಡಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದಾರೆ. ಇವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ನಿಂದ ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ, ಕುರುಬ ಸಮಾಜದ ವಿನೋದ ಅಸೂಟಿ ಸ್ಪರ್ಧಿಸುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ಚುನಾವಣೆಗೆ ಕ್ಷೇತ್ರದಿಂದ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಇದರ ನಡುವೆ ಸ್ವಾಮೀಜಿಗಳು ತಾವು ಸ್ಪರ್ಧಿಯಾಗಿ ಕಣಕ್ಕಿಳಿದಿರುವ ಬಗ್ಗೆ ತಿಳಿಸಿದ್ದಾರೆ.
ಪ್ರಹ್ಲಾದ್ ಜೋಶಿಗೆ ಪ್ರತಿಸ್ಪರ್ಧಿಯಾಗಿ ವಿನೋದ ಅಸೂಟಿ ಹೆಸರು ಘೋಷಿಸಿದ ನಂತರವೂ ಕ್ಷೇತ್ರದಲ್ಲಿ ಅಷ್ಟೊಂದು ಬೆಳವಣಿಗೆಗಳು ಕಂಡು ಬರಲಿಲ್ಲ. ಆದರೆ ಶಿರಹಟ್ಟಿ ಮಠದ ಪಕೀರ ದಿಂಗಾಲೇಶ್ವರ ಸ್ವಾಮೀಜಿಯ ಆಗಮನದವರೆಗು ಶಾಂತವಾಗಿಯೇ ಇದ್ದ ಕ್ಷೇತ್ರ, ಸ್ವಾಮೀಜಿಯವರ ಆಗಮನ ನಂತರ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
ಬಿಜೆಪಿಯಿಂದ ಜೋಶಿಗೆ ಟಿಕೆಟ್ ನೀಡಬೇಡಿ ಎಂದು ದಿಂಗಾಲೇಶ್ವರ ಸ್ವಾಮಿಗಳು ಎನ್ಡಿಎ ತಿಳಿಸಿದ್ದರು. ಇದ್ಯಾವುದನ್ನು ಕ್ಯಾರೆ ಎನ್ನದ ಎನ್ಡಿಎ ವಿರುದ್ಧ ಅಸಮಧಾನಗೊಂಡ ಸ್ವಾಮಿಜಿ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…