BREAKING NEWS

ದೆಹಿಲಿ-ಲಡಾಖ್‌ನ ಲೇಹ್‌ ಗೆ ನೇರ ಬಸ್‌: ಜೂ.15ರಿಂದ ಆರಂಭ

ಹಿಮಚ್ಛಾದಿತ ಲೇಹ್‌ ಸೌಂದರ್ಯವನ್ನು ಸವಿಯುವುದು ಪ್ರವಾಸಿಗರಿಗೆ ಇನ್ನು ಸುಲಭ. ಈ ಹಿಂದೆ ಕಿರಿದಾದ ರಸ್ತೆಗಳಲ್ಲಿ ಸಾಗುತ್ತಿದ್ದ ಪ್ರವಾಸಿಗರು, ಇನ್ನು ಮುಂದೆ ಯಾವುದೇ ಭಯವಿಲ್ಲದೇ ಬಸ್‌ನಲ್ಲಿ ಸುರಕ್ಷಿತವಾಗಿ ಪ್ರಕೃತಿಯ ಸೌಂದರ್ಯ ಸವಿಯುತ್ತಾ ದೆಹಲಿಯಿಂದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನ ಲೇಹ್‌ ತಲುಪಬಹುದು.

ಜೂ.15ರಂದು ಬಸ್‌ ಸೇವೆ ಆರಂಭ
ಹಿಮಾಚಲ ರಸ್ತೆ ಸಾರಿಗೆ ನಿಗಮ(ಎಚ್‌ಆರ್‌ಟಿಸಿ)ವು ದೆಹಲಿಯಿಂದ ಲೇಹ್‌ಗೆ ಜೂ.15ರಿಂದ ಬಸ್‌ ಸೇವೆ ಆರಂಭಿಸಲಿದೆ. ಈ ಹಿಂದೆ ಪ್ರವಾಸಿಗರು ದೆಹಲಿ ತಲುಪಿ, ಅಲ್ಲಿಂದ ವಿಮಾನದ ಮೂಲಕ ಅಥವಾ ಟ್ಯಾಕ್ಸಿ ಅಥವಾ ಕಾರಿನ ಮೂಲಕ ಕಿರಿದಾದ ರಸ್ತೆಯಲ್ಲಿ ಲೇಹ್‌ ತಲುಪಬೇಕಿತ್ತು. ಕೆಲವರು ಬುಲೆಟ್‌ ರೀತಿಯ ಬೈಕ್‌ಗಳಲ್ಲೂ ಹೋಗುತ್ತಿದ್ದರು. ಈಗ ಮೊಟ್ಟ ಮೊದಲ ಬಾರಿಗೆ ದೆಹಲಿಯಿಂದ ಲೇಹ್‌ಗೆ ನೇರ ಬಸ್‌ ಸೇವೆ ಆರಂಭಿಸಲಾಗುತ್ತಿದೆ. ಇದಕ್ಕಾಗಿ ರಸ್ತೆಯನ್ನು ವಿಸ್ತರಿಸಲಾಗಿದೆ.

ಮನಮೋಹಕ ಪ್ರಕೃತಿ ಸವಿಯುವ ಅವಕಾಶ
ಈ ಬಸ್‌ ಮಾರ್ಗವು ಮನಾಲಿ-ಲೇಹ್‌ ಹೆದ್ದಾರಿ ಮೂಲಕ ಸಾಗಲಿದೆ. ಈ ಮಾರ್ಗದಲ್ಲಿ ಪ್ರಕೃತಿ ಮನಮೋಹಕವಾಗಿದ್ದು, ನೋಡುಗರಿಗೆ ರಸಾನುಭವ ಉಣಿಸಲಿದೆ. ಹಿಮಾಲಯ ಪರ್ವತ ಶ್ರೇಣಿಗಳ ಮೂಲಕ ಹಾದುಹಾಗುವ ಈ ಮಾರ್ಗವು, ಬರಲಚಾ ಪಾಸ್‌, ನಕೀಲ ಪಾಸ್‌, ತಗ್ಲಾಂಗ್‌ ಲಾ ಪಾಸ್‌ ಸೇರಿದಂತೆ ಅನೇಕ ಮಾರ್ಗಗಳ ಮೂಲಕ ಸಾಗಲಿದೆ. ತಗ್ಲಾಂಗ್‌ ಲಾ ಪಾಸ್‌ ಸಮುದ್ರ ಮಟ್ಟದಿಂದ 17,582 ಅಡಿ ಎತ್ತರದಲ್ಲಿದೆ.

ಪ್ರಯಾಣದ ಸಮಯ
ಪ್ರತಿ ದಿನ ಮಧ್ಯಾಹ್ನ 3.30ಕ್ಕೆ ದೆಹಲಿ ಅಂತಾರಾಜ್ಯ ಬಸ್‌ ನಿಲ್ದಾಣದಿಂದ ಹೊರಡುವ ಬಸ್‌, ಮಾರ್ಗಮಧ್ಯೆ ಕಿಲಾಂಗ್‌ನಲ್ಲಿ ಹಾಲ್ಟ್ ಆಗಲಿದ್ದು, ಮಾರನೇ ದಿನ ಸಂಜೆ 6 ಗಂಟೆಗೆ ಲೇಹ್‌ ತಲುಪಲಿದೆ. ಸುಖಾಸನಗಳು, ಹವಾನಿಯಂತ್ರಿತ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆಯೂ ಬಸ್‌ನಲ್ಲಿರಲಿವೆ.
……………….

ಬಸ್‌ ಟಿಕೆಟ್‌ ದರವೆಷ್ಟು?– 1,500 ರೂ.
ದೆಹಲಿಯಿಂದ ಲೇಹ್‌ಗೆ ಇರುವ ದೂರ– 1,072 ಕಿ.ಮೀ.
ತಗ್ಲಾಂಗ್‌ ಲಾ ಪಾಸ್‌ ಎಷ್ಟು ಎತ್ತರದಲ್ಲಿದೆ?- 17,582 ಅಡಿ

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

6 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

7 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

7 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

9 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

13 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

13 hours ago