ಬೆಂಗಳೂರು: ಇನ್ನು ಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆಂದು ಹಿರಿಯ ನಾಗರೀಕರು ಸರತಿಯಲ್ಲಿ ನಿಂತು ಕಷ್ಟಪಡುವ ಅವಶ್ಯಕತೆ ಇಲ್ಲ. 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದೇವಾಲಯಗಳಾದ ‘ಎ’ ವರ್ಗ ಹಾಗೂ ‘ಬಿ’ ವರ್ಗ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧವಂತರ ಒಕ್ಕೂಟ ಮನವಿ ಮಾಡಿತ್ತು.
65 ವರ್ಷ ಮೇಲ್ಪಟ್ಟ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ವಯಸ್ಸಿನ ಆಧಾರದ ಮೇಲೆ ಸರತಿಯ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಒಕ್ಕೂಟವು ಮನವಿ ಪತ್ರದಲ್ಲಿ ಉಲ್ಲೇಖಿಸಿತ್ತು. ಸದ್ಯ ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ.
ಯಾವ ಯಾವ ದೇವಸ್ಥಾನಗಳಲ್ಲಿ ಅನ್ವಯ?: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ ಈ ಸೌಲಭ್ಯ ಸಿಗಲಿದೆ. ಸದ್ಯ ಕುಕ್ಕೆ ಸುಬ್ರಮಣ್ಯ, ಚಾಮುಂಡಿಬೆಟ್ಟ, ಸಿಗಂದೂರು, ಕೊಲ್ಲೂರು ಸೇರಿದಂತೆ ನಾಡಿನ ಎಲ್ಲಾ ಪ್ರಮುಖ ದೇವಸ್ಥಾನಗಳೂ ಕೂಡಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿವೆ.
ಪ್ರತ್ಯೇಕ ವ್ಯವಸ್ಥೆಗೆ ಸೌಲಭ್ಯ ನೀಡಿ: ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಗಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿದೆ. ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರೀಕರಿಗೆಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.
ಹಿರಿಯ ನಾಗರೀಕರ ಸಹಾಯ ಕೇಂದ್ರ ಸ್ಥಾಪಿಸಿ: ದೇವಾಲಯಗಳಲ್ಲಿ ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕು. ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು, ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ವಯಸ್ಸಿನ ದಾಖಲೆ ನೀಡಬೇಕು: ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…