ಬೆಂಗಳೂರು: ಇನ್ನು ಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆಂದು ಹಿರಿಯ ನಾಗರೀಕರು ಸರತಿಯಲ್ಲಿ ನಿಂತು ಕಷ್ಟಪಡುವ ಅವಶ್ಯಕತೆ ಇಲ್ಲ. 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.
ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದೇವಾಲಯಗಳಾದ ‘ಎ’ ವರ್ಗ ಹಾಗೂ ‘ಬಿ’ ವರ್ಗ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧವಂತರ ಒಕ್ಕೂಟ ಮನವಿ ಮಾಡಿತ್ತು.
65 ವರ್ಷ ಮೇಲ್ಪಟ್ಟ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ವಯಸ್ಸಿನ ಆಧಾರದ ಮೇಲೆ ಸರತಿಯ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಒಕ್ಕೂಟವು ಮನವಿ ಪತ್ರದಲ್ಲಿ ಉಲ್ಲೇಖಿಸಿತ್ತು. ಸದ್ಯ ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ.
ಯಾವ ಯಾವ ದೇವಸ್ಥಾನಗಳಲ್ಲಿ ಅನ್ವಯ?: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ ಈ ಸೌಲಭ್ಯ ಸಿಗಲಿದೆ. ಸದ್ಯ ಕುಕ್ಕೆ ಸುಬ್ರಮಣ್ಯ, ಚಾಮುಂಡಿಬೆಟ್ಟ, ಸಿಗಂದೂರು, ಕೊಲ್ಲೂರು ಸೇರಿದಂತೆ ನಾಡಿನ ಎಲ್ಲಾ ಪ್ರಮುಖ ದೇವಸ್ಥಾನಗಳೂ ಕೂಡಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿವೆ.
ಪ್ರತ್ಯೇಕ ವ್ಯವಸ್ಥೆಗೆ ಸೌಲಭ್ಯ ನೀಡಿ: ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಗಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿದೆ. ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರೀಕರಿಗೆಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.
ಹಿರಿಯ ನಾಗರೀಕರ ಸಹಾಯ ಕೇಂದ್ರ ಸ್ಥಾಪಿಸಿ: ದೇವಾಲಯಗಳಲ್ಲಿ ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕು. ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು, ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.
ವಯಸ್ಸಿನ ದಾಖಲೆ ನೀಡಬೇಕು: ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…