BREAKING NEWS

ರಾಜ್ಯದ ದೇವಸ್ಥಾನಗಳಲ್ಲಿ ಹಿರಿಯ ನಾಗರೀಕರಿಗೆ ನೇರ ದರ್ಶನ ಸೌಲಭ್ಯ: ಸರ್ಕಾರ ಆದೇಶ

ಬೆಂಗಳೂರು: ಇನ್ನು ಮುಂದೆ ರಾಜ್ಯದ ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆಂದು ಹಿರಿಯ ನಾಗರೀಕರು ಸರತಿಯಲ್ಲಿ ನಿಂತು ಕಷ್ಟಪಡುವ ಅವಶ್ಯಕತೆ ಇಲ್ಲ. 65 ವರ್ಷ ಮೇಲ್ಪಟ್ಟವರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯು ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದೇವಾಲಯಗಳಾದ ‘ಎ’ ವರ್ಗ ಹಾಗೂ ‘ಬಿ’ ವರ್ಗ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ನೇರವಾಗಿ ದೇವರ ದರ್ಶನ ಸೌಲಭ್ಯ ಒದಗಿಸುವ ಬಗ್ಗೆ ಬೆಂಗಳೂರಿನ ಚಾಮರಾಜಪೇಟೆಯ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧವಂತರ ಒಕ್ಕೂಟ ಮನವಿ ಮಾಡಿತ್ತು.

65 ವರ್ಷ ಮೇಲ್ಪಟ್ಟ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದಕ್ಕೆ ತುಂಬಾ ತೊಂದರೆಯಾಗುತ್ತಿರುವುದರಿಂದ ವಯಸ್ಸಿನ ಆಧಾರದ ಮೇಲೆ ಸರತಿಯ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಒಕ್ಕೂಟವು ಮನವಿ ಪತ್ರದಲ್ಲಿ ಉಲ್ಲೇಖಿಸಿತ್ತು. ಸದ್ಯ ಈ ಬಗ್ಗೆ ಪರಿಶೀಲನೆ ನಡೆಸಿದ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳಲ್ಲಿ ಹಿರಿಯರಿಗೆ ನೇರ ದರ್ಶನ ಸೌಲಭ್ಯಕ್ಕೆ ಸೂಚನೆ ನೀಡಿದೆ.

ಯಾವ ಯಾವ ದೇವಸ್ಥಾನಗಳಲ್ಲಿ ಅನ್ವಯ?: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ‘ಎ’ ಮತ್ತು ‘ಬಿ’ ವರ್ಗದ ದೇವಾಲಯಗಳಲ್ಲಿ ಈ ಸೌಲಭ್ಯ ಸಿಗಲಿದೆ. ಸದ್ಯ ಕುಕ್ಕೆ ಸುಬ್ರಮಣ್ಯ, ಚಾಮುಂಡಿಬೆಟ್ಟ, ಸಿಗಂದೂರು, ಕೊಲ್ಲೂರು ಸೇರಿದಂತೆ ನಾಡಿನ ಎಲ್ಲಾ ಪ್ರಮುಖ ದೇವಸ್ಥಾನಗಳೂ ಕೂಡಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿವೆ.

ಪ್ರತ್ಯೇಕ ವ್ಯವಸ್ಥೆಗೆ ಸೌಲಭ್ಯ ನೀಡಿ: ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಗಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿದೆ. ದೇವಾಲಯದಲ್ಲಿ ಸ್ಥಳಾವಕಾಶ ಇದ್ದಲ್ಲಿ ಹಿರಿಯ ನಾಗರೀಕರಿಗೆಂದು ಪ್ರತ್ಯೇಕ ಸ್ಥಳ ಕಾಯ್ದಿರಿಸಲು ಧಾರ್ಮಿಕ ದತ್ತಿ ಇಲಾಖೆ ಸೂಚಿಸಿದೆ.

ಹಿರಿಯ ನಾಗರೀಕರ ಸಹಾಯ ಕೇಂದ್ರ ಸ್ಥಾಪಿಸಿ: ದೇವಾಲಯಗಳಲ್ಲಿ ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕು. ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು, ಸದರಿ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.

ವಯಸ್ಸಿನ ದಾಖಲೆ ನೀಡಬೇಕು: ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ/ ಆಧಾರ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago