BREAKING NEWS

ವಿಪತ್ತು ಪರಿಹಾರ ನಿಧಿ: 22 ರಾಜ್ಯಗಳಿಗೆ ಕೇಂದ್ರದಿಂದ ರೂ.7,532 ಕೋಟಿ ಬಿಡುಗಡೆ

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ದೇಶಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಒದಗಿಸಲಾದ ಮೊತ್ತದ ಬಳಕೆಯ ಪ್ರಮಾಣಪತ್ರಕ್ಕಾಗಿ ಕಾಯದೆ ರಾಜ್ಯಗಳಿಗೆ ತಕ್ಷಣದ ಸಹಾಯಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾ ಸಾಮಾನ್ಯ ರಾಜ್ಯಗಳಲ್ಲಿ ಎಸ್‌ಡಿಆರ್‌ಎಫ್‌ಗೆ ಶೇಕಡಾ 75 ಮತ್ತು ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳಲ್ಲಿ ಶೇಕಡಾ 90 ರಷ್ಟು ಕೊಡುಗೆ ನೀಡುತ್ತದೆ. ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಾರ್ಷಿಕ ಎರಡು ಸಮಾನ ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಮಾರ್ಗಸೂಚಿಗಳ ಪ್ರಕಾರ, ಹಿಂದಿನ ಕಂತಿನಲ್ಲಿ ಬಿಡುಗಡೆಯಾದ ಮೊತ್ತದ ಬಳಕೆಯ ಪ್ರಮಾಣಪತ್ರದ ಸ್ವೀಕೃತಿ ಮತ್ತು ಎಸ್‌ಡಿಆರ್‌ಎಫ್‌ನಿಂದ ಕೈಗೊಂಡ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ವರದಿಯನ್ನು ಸ್ವೀಕರಿಸಿದ ನಂತರ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
andolanait

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

3 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

3 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

3 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

4 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

4 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

4 hours ago