BREAKING NEWS

ವಿಪತ್ತು ಪರಿಹಾರ ನಿಧಿ: 22 ರಾಜ್ಯಗಳಿಗೆ ಕೇಂದ್ರದಿಂದ ರೂ.7,532 ಕೋಟಿ ಬಿಡುಗಡೆ

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ.

ದೇಶಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಲಾಗಿದೆ ಮತ್ತು ಕಳೆದ ಆರ್ಥಿಕ ವರ್ಷದಲ್ಲಿ ರಾಜ್ಯಗಳಿಗೆ ಒದಗಿಸಲಾದ ಮೊತ್ತದ ಬಳಕೆಯ ಪ್ರಮಾಣಪತ್ರಕ್ಕಾಗಿ ಕಾಯದೆ ರಾಜ್ಯಗಳಿಗೆ ತಕ್ಷಣದ ಸಹಾಯಕ್ಕಾಗಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರ ಸರ್ಕಾ ಸಾಮಾನ್ಯ ರಾಜ್ಯಗಳಲ್ಲಿ ಎಸ್‌ಡಿಆರ್‌ಎಫ್‌ಗೆ ಶೇಕಡಾ 75 ಮತ್ತು ಈಶಾನ್ಯ ಮತ್ತು ಹಿಮಾಲಯ ರಾಜ್ಯಗಳಲ್ಲಿ ಶೇಕಡಾ 90 ರಷ್ಟು ಕೊಡುಗೆ ನೀಡುತ್ತದೆ. ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಾರ್ಷಿಕ ಎರಡು ಸಮಾನ ಕಂತುಗಳಲ್ಲಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಮಾರ್ಗಸೂಚಿಗಳ ಪ್ರಕಾರ, ಹಿಂದಿನ ಕಂತಿನಲ್ಲಿ ಬಿಡುಗಡೆಯಾದ ಮೊತ್ತದ ಬಳಕೆಯ ಪ್ರಮಾಣಪತ್ರದ ಸ್ವೀಕೃತಿ ಮತ್ತು ಎಸ್‌ಡಿಆರ್‌ಎಫ್‌ನಿಂದ ಕೈಗೊಂಡ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರದಿಂದ ವರದಿಯನ್ನು ಸ್ವೀಕರಿಸಿದ ನಂತರ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.
andolanait

Recent Posts

ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ: ಮೃತರ ಸಂಖ್ಯೆ 40ಕ್ಕೆ ಏರಿಕೆ

ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್‌ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…

3 hours ago

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

3 hours ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

13 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

17 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

18 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

19 hours ago