BREAKING NEWS

ಐರೋಪ್ಯ ಸಂಸತ್‌ನಲ್ಲಿ ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿ: ಪ್ರಧಾನಿ ಮೌನ ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ: ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮಣಿಪುರ ಹೊತ್ತಿ ಉರಿಯುತ್ತಿದೆ. ಯುರೋಪಿಯನ್ ಪಾರ್ಲಿಮೆಂಟ್ ಭಾರತದ ಆಂತರಿಕ ವಿಷಯವನ್ನು ಚರ್ಚಿಸುತ್ತದೆ. ಆದರೆ, ಪ್ರಧಾನಿ ಒಂದೂ ಮಾತನಾಡಿಲ್ಲ. ಅಷ್ಟರಲ್ಲಿ ಅವರಿಗೆ ಬಾಸ್ಟಿಲ್ ಡೇ ಪರೇಡ್‌ಗೆ ಟಿಕೆಟ್ ಸಿಗುತ್ತದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ಜೂನ್ 29 ಮತ್ತು 30 ರಂದು ಎರಡು ದಿನಗಳ ಕಾಲ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದರು ಮತ್ತು ಪರಿಹಾರ ಶಿಬಿರಗಳಲ್ಲಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿದ್ದರು.

ಅವರು ಮಣಿಪುರದ ರಾಜ್ಯಪಾಲರಾದ ಅನುಸೂಯಾ ಉಯಿಕೆ ಅವರನ್ನು ಭೇಟಿಯಾಗಿ ಪರಿಹಾರ ಶಿಬಿರಗಳ ಸ್ಥಿತಿಯ ಬಗ್ಗೆ ತಿಳಿಸಿದ್ದರು ಮತ್ತು ಈಶಾನ್ಯ ರಾಜ್ಯದಲ್ಲಿ ಸಹಜ ಸ್ಥಿತಿಯನ್ನು ಮರಳಿ ತರುವಂತೆ ಮನವಿ ಮಾಡಿದರು.

ಮಣಿಪುರದಲ್ಲಿ ಮೇ 3 ರಂದು ಜನಾಂಗೀಯ ಹಿಂಸಾಚಾರ ಸ್ಫೋಟಗೊಂಡಿತು ಮತ್ತು ಅಂದಿನಿಂದ 100ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಮತ್ತು ಸಾವಿರಾರು ಜನರು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನವಾಗಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ ಮತ್ತು ರಾಜ್ಯದಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲವಾದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದೆ.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

17 mins ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

1 hour ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

3 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

9 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

15 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

15 hours ago